ಚುನಾವಣೆ ಪ್ರಜಾಪ್ರಭುತ್ವದ ರಾಷ್ಟ್ರೀಯ ಹಬ್ಬ:ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು-ಕುಲಪತಿ ಡಾ.ವಿ.ಎಸ್.ಬಿರಾದಾರ


ಬೀದರ.25ಜನವರಿ.25:- ಭಾರತವು ಬಲಿಷ್ಠವಾದ ಪ್ರಜಾಪ್ರಭುತ್ವ ದೇಶ. ಅರ್ಹ ಮತದಾರರು ತಪ್ಪದೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ತಮ್ಮಿಷ್ಟದ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ವಿ.ಎಸ್.ಬಿರಾದಾರ ಹೇಳಿದರು.


ರಂಗಮoದಿರದಲ್ಲಿoದು ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಯ ಮತದಾರರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಮತದಾನದ ದಿನದಂದು ಮತ ಹಾಕದಿರಲು ಯಾವುದೇ ನೆಪ ಹೇಳದೆ ತಪ್ಪದೇ ಮತದಾನ ಮಾಡಬೇಕು. ಮತಕ್ಕಿಂತ ಮಹತ್ವ ಇನ್ನೊಂದಿಲ್ಲ. ನಾನು ಖಚಿತವಾಗಿ, ಕಡ್ಡಾಯವಾಗಿ ಮತದಾನ ಮಾಡುತ್ತೇನೆಂದು ಪ್ರತಿಜ್ಞೆಗೈದು, ಯಾವುದೇ ಆಶೆ, ಆಕ್ಷಾಂಕ್ಷೆಗಳಿಗೆ ಒಳಗಾಗದೇ ಮತ ಚಲಾಯಿಸಬೇಕೆಂದು ಯುವ ವಿದ್ಯಾರ್ಥಿಗಳಿಗೆ ತಿಳಿಸಿದರು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದರು.


ಸರಕಾರದ ವಿವಿಧ ಸಹಾಯ ಸೌಲಭ್ಯ ಪಡೆಯಲು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡುವುದಲ್ಲದೇ ತಮ್ಮ ಸುತ್ತಮುತ್ತಲಿನವರೆಲ್ಲರನ್ನು ಮತ ಚಲಾಯಿಸುವಂತೆ ಪ್ರೇರೆಪಿಸಬೇಕೆಂದರು.


ಮತದಾನ ದಿನದಂದು ಕುಂಟು ನೆಪ ಹೇಳಿ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಬೇಕು. ಚುನಾವಣೆ ಪ್ರಜಾಪ್ರಭುತ್ವದ ರಾಷ್ಟಿçÃಯ ಹಬ್ಬ. ಈ ಹಬ್ಬದಲ್ಲಿ ಎಲ್ಲರು ಸಂತಸದಿAದ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಭಾರತದ ಸದೃಢ ಅಭಿವೃದ್ಧಿಗಾಗಿ ಹಾಗೂ ಸುಸ್ಥಿರ ಸರ್ಕಾರದ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡಬೇಕೆಂದರು.


ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಯುವ ಮತದಾರರು 18 ರಿಂದ 21 ವಯಸ್ಸಿನ ಯುವಕರ ಪಾತ್ರ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಯಾವುದೇ ಆಶೆ, ಆಮೀಶಗಳಿಗೆ ಒಳಗಾಗಿ ಜವಾಬ್ದಾರಿಯಿಂದ ತಮ್ಮಿಷ್ಟದ ಅಭ್ಯರ್ಥಿಗೆ ಮತ ಚಲಾಯಿಸಬೇಕೆಂದರು. ಮತದಾನದಿಂದ ಪ್ರಜಾಪ್ರಭುತ್ವ ಸದೃಢಗೊಳ್ಳುತ್ತದೆ. ಸ್ಥಿರ ಸರ್ಕಾರ ರಚನೆಗೊಳ್ಳುತ್ತದೆ.

ಇದರಿಂದ ಮೂಲಭೂತ ಸೌಕರ್ಯಗಳ ಅಬಿವೃದ್ಧಿ ಕಾಣಬಹುದು. ಪ್ರತಿ ಐದು ವರ್ಷಕ್ಕೊಮ್ಮೆ ನಮಗೆ ಮತದಾನದ ಅವಕಾಶ ದೊರೆಯುತ್ತದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಢಿಸಲು ಜಿಲ್ಲಾಡಳಿತದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಯುವಕರು ತಮ್ಮ ಮೊಬೈಲ್‌ನಲ್ಲಿ ವೋರ‍್ಸ್ ಹೆಲ್ಪಲೈನ್ ಆö್ಯಪ್ ಡೌನಲೋಡ ಮಾಡಿ ಫಾರ್ಮ ನಂ. 6 ಭರ್ತಿ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ಹಿರಿಯರ ಸ್ವಾತಂತ್ರ ಹೋರಾಟದಿಂದಾಗಿ ದೇಶಕ್ಕೆ ಸ್ವಾತಂತ್ರö್ಯ ದೊರೆಕಿದ್ದು, ಪ್ರತಿಯೊಬ್ಬರು ಸ್ವತಂತ್ರತೆಯನ್ನು ಸ್ವಚ್ಚವಾಗಿ ಜೀವಿಸಲು ಭದ್ರ ಪ್ರಜಾಪ್ರಭುತ್ವದ ಸರಕಾರ ಅಗತ್ಯ. ಜಗತ್ತಿನಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವದೇಶ. ಚುನಾವಣೆ ಹಾಗೂ ಮತದಾನ ಮಹತ್ವವಾಗಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು, ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮತದಾನ ಜಾಗೃತಿ ಕುರಿತು ರಿಲ್ಸ್ ಹಾಗೂ ಮತದಾರರ ಜಾಗೃತಿ ಲೋಗೋ ತಯ್ಯಾರಿಸಿದವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಯುವ ಮತದಾರರ ಸಾಂಕೇತಿಕವಾಗಿ ಎಪಿಕ್ ಕಾರ್ಡ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ಹಿರಿಯರ ಸ್ವಾತಂತ್ರ ಹೋರಾಟದಿಂದಾಗಿ ದೇಶಕ್ಕೆ ಸ್ವಾತಂತ್ರö್ಯ ದೊರೆಕಿದ್ದು, ಪ್ರತಿಯೊಬ್ಬರು ಸ್ವತಂತ್ರತೆಯನ್ನು ಸ್ವಚ್ಚವಾಗಿ ಜೀವಿಸಲು ಭದ್ರ ಪ್ರಜಾಪ್ರಭುತ್ವದ ಸರಕಾರ ಅಗತ್ಯ. ಜಗತ್ತಿನಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವದೇಶ. ಚುನಾವಣೆ ಹಾಗೂ ಮತದಾನ ಮಹತ್ವವಾಗಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದರು.


ಈ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುತ್ತಣ್ಣ ಕಲಿಗಾರ, ಬೀದರ ವಿಶ್ವವಿದ್ಯಾಲಯದ ಕುಲಸಚಿವರು, ಸುರೇಖಾ, ರಾಜ್ಯ ಮಾಸ್ಟರ ಟ್ರೇನರ ಗೌತಮ ಅರಳಿ, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

20 minutes ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

34 minutes ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

38 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

42 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

1 hour ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago