ಛತ್ರಪತಿ ಶಿವಾಜಿ ಮಹಾರಾಜ  ಜಯಂತಿಯನ್ನು ಅದ್ದೂರಿಯಾಗಿಆಚರಿಸೋಣ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ


ಬೀದರ.07.ಫೆಬ್ರುವರಿ.25:-ಪ್ರತಿ ವರ್ಷದಂತೆ ಈ ವರ್ಷವು ಕೂಡ ಫೆಬ್ರುವರಿ. 19 ರಂದು ಬರುವ ಛತ್ರಪತಿ ಶಿವಾಜಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಅಂದು ಅರೆ ಸರ್ಕಾರಿ ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು. ನಂತರ ಛತ್ರಪತಿ ಶಿವಾಜಿಯವರ ಭಾವಚಿತ್ರದ ಮೆರವಣಿಗೆಯು ಪ್ರಾರಂಭಗೊಂಡು ಶಿವಾಜಿ ವೃತ್ತ, ಹರಳಯ್ಯ ವೃತ್ತ, ಜನರಲ್ ಕರಿಯಪ್ಪ ವೃತ್ತ, ಅಂಬೇಡ್ಕರ ವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ  ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರೋಟರಿ ವೃತ್ತದಿಂದ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದವರೆಗೆ ನಡೆಯುವುದು ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.


ನಗರಸಭೆ ವತಿಯಿಂದ ಮೆರವಣಿಗೆ ಹಾದು ಹೋಗುವ ಮಾರ್ಗದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶಿವಾಜಿ ವೃತ್ತಕ್ಕೆ ಸುಣ್ಣ ಬಣ್ಣ, ಅಲಂಕಾರ, ಎಲ್ಲ ವೃತ್ತಗಳ ಮೇಲೆ ದೀಪಾಲಂಕಾರ ಮಾಡುವುದು.  ಶಿಕ್ಷಣ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿಯವರ ಜೀವನ ಚರಿತ್ರೆ ನಿಬಂಧ ಸ್ಪರ್ಧೆಗಳನ್ನು ಏರ್ಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2 ಕಲಾ ತಂಡಗಳ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಪೊಲೀಸ್ ಇಲಾಖೆ ವತಿಯಿಂದ ಮೆರವಣಿಗೆ ಹಾದು ಹೋಗುವ ಸ್ಥಳಗಳಲ್ಲಿ ಸಂಚಾರಿ ನಿಯಂತ್ರಣ ಬಂದೋಬಸ್ತ ವ್ಯವಸ್ಥೆ ಮಾಡುವುದು.


ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಸಮಾಜದ ಮುಖಂಡರಾದ ಮದನರಾವ ಬಿರಾದಾರ, ರಘುನಾಥ ಜಾಧವ, ವೆಂಕಟರಾವ ಮಹಾಂದೆ, ಮಾಧವರಾವ ಗುರೂಜಿ, ರಾಜಕುಮಾರ ಪಾಟೀಲ, ಪಂಡಿತ ಜಾಧವ, ಅಶೋಕ ಚವ್ಹಾಣ, ಸುರೇಶ ರಾಠೋಡ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

4 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

7 hours ago