ಬೆಳಗಾವಿ.19.ಮೇ.25:- ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಭವ್ಯ ನೂತನ ಮೂರ್ತಿಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶ್ರೀ ಶ್ರೀಶೈಲ್ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
