ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು-ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.02.ಏಪ್ರಿಲ್.25:- ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.


ಅವರು ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ನಿಮಿತ್ಯ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ನಾವು ಬಸವಣ್ಣನವರ ಪುಣ್ಯಭೂಮಿ ಕಲ್ಯಾಣ ನೆಲದಲ್ಲಿ ನೆಲೆಸಿದ್ದೇವೆ. 12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ವಚನ ಕ್ರಾಂತಿಯು ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಆಗುವಂತೆ ಮಾಡಿತು. ಬಸವಣ್ಣನವರ ವಚನ ಸಾಹಿತ್ಯದ ಮೂಲಕ ಜಾತಿರಹಿತ ಸಮಾಜ, ಸಮ ಸಮಾಜ ಮತ್ತು ಮೇಲು ಕೀಳು ಎಂಬ ಭಾವನೆಗಳು ಹೋಗಲಾಡಿಸಲು ಅವರ ಪ್ರಯತ್ನ ಮಹತ್ವದಾಗಿದೆ. ಇಂದು ನಾವು ಕೂಡ ಬಸವಣ್ಣನವರ ತತ್ವ- ಸಂದೇಶಗಳನ್ನು ಮಾರ್ಗದರ್ಶನವಾಗಿ ಇಟ್ಟಿಕೊಂಡು ಸಮ ಸಮಾಜದ ನಿರ್ಮಾಣ ಮಾಡಬೇಕಾಗಿದೆ ಮತ್ತು ವಚನಗಳ ಆಶಯಗಳನ್ನು ತಿಳಿದುಕೊಂಡು ಸಮಾನತೆಯಿಂದ ಕೂಡಿ ಬಾಳಬೇಕು ಎಂದು ತಿಳಿಸಿದರು.


ಇದಕ್ಕೂ ಮುಂಚೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಮಾಜಿ ಸಚಿವ ಬಂಡೆಪ್ಪ ಖಾಶಂಪೂರ, ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ, ಜೈರಾಜ್ ಖಂಡ್ರೆ, ಆನಂದ ದೇವಪ್ಪ, ಬಾಬು ವಾಲಿ, ಪಂಡಿತ ಚಿದ್ರಿ, ಈಶ್ವರಸಿಂಗ್ ಠಾಕೂರ್, ಸಂಜು ಕುಮಾರ್ ಪಾಟೀಲ್, ಮಾರುತಿ ಬೌದ್ಧೆ, ವಿಜಯಕುಮಾರ ಸೊನಾರೆ ಸೇರಿದಂತೆ ಬಸವ ಅಭಿಮಾನಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

4 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

6 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

13 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

16 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

16 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

16 hours ago