ಇಂದು ಬಿಡುಗಡೆಯಾದ ಜಗತ್ತಿನ ಉನ್ನತ ಶಿಕ್ಷಣ ಲಂಡನ್ ಮೂಲದ ಉನ್ನತ ಶಿಕ್ಷಣ ವಿಶ್ಲೇಷಣಾ ಸಂಸ್ಥೆ ಕ್ವಾಕ್ವೆರೆಲ್ಲಿ ಸೈಮಂಡ್ಸ್ (ಕ್ಯೂಎಸ್) 2026ನೇ ಸಾಲಿನ ಜಾಗತಿಕ ಅತ್ಯುತ್ತಮ ವಿವಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಭಾರತದ 54 ವಿಶ್ವವಿದ್ಯಾಲಯಗಳು ಸ್ಥಾನ ಪಡೆದುಕೊಂಡು ದಾಖಲೆ ನಿರ್ಮಿಸಿವೆ. ಈ ಮೂಲಕ ಅತ್ಯುತ್ತಮ ವಿವಿಗಳನ್ನು ಹೊಂದಿದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನ ಪಡೆದುಕೊಂಡಿದೆ.
ಭಾರತದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ‘ಕ್ಯೂಎಸ್ ಜಾಗತಿಕ ವಿವಿ 2026ರ ಶ್ರೇಯಾಂಕ ನಮ್ಮ ಶಿಕ್ಷಣ ಕ್ಷೇತ್ರಕ್ಕೆ ಶುಭಸುದ್ದಿ ತಂದಿದೆ. ಭಾರತದ ಯುವಜನರ ಪ್ರಯೋಜನಕ್ಕಾಗಿ ಸಂಶೋಧನೆ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ತರಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ವರದಿಯೆಲ್ಲಿ ವಿಶೇಷತೆ ಏನು ?
ಕ್ವಾಕ್ವೆರೆಲ್ಲಿ ಸೈಮಂಡ್ಸ್ (ಕ್ಯೂಎಸ್) ಲಂಡನ್ ಮೂಲದ ಜಾಗತಿಕ ಉನ್ನತ ಶಿಕ್ಷಣ ವಿಶ್ಲೇಷಣಾ ಸಂಸ್ಥೆಯಾಗಿದ್ದು, ಪ್ರತಿವರ್ಷ ಜಗತ್ತಿನ ಅತ್ಯುತ್ತಮ ವಿವಿಗಳನ್ನು ಗುರುತಿಸಿ ಪಟ್ಟಿ ಬಿಡುಗಡೆ ಮಾಡುತ್ತದೆ. ವಿವಿಗಳ ಶೈಕ್ಷಣಿಕ ಸಾಧನೆ, ವಿದ್ಯಾರ್ಥಿ-ಸಿಬ್ಬಂದಿ ಅನುಪಾತ, ಸಂಶೋಧನಾ ಪರಿಣಾಮ, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ವೈವಿಧ್ಯ ಹಾಗೂ ಪದವೀಧರರಿಗೆ ಸಿಕ್ಕ ಉದ್ಯೋಗಾವಕಾಶ ಇತ್ಯಾದಿ ಮಾನದಂಡಗಳನ್ನು ಗುರುತಿಸಿ, ವಿವಿಗಳಿಗೆ ಶ್ರೇಯಾಂಕಗಳನ್ನು ನೀಡುತ್ತದೆ.
2026ನೇ ಸಾಲಿನ ಪಟ್ಟಿಯಲ್ಲಿ 1,500ಕ್ಕೂ ಅಧಿಕ ವಿವಿಗಳನ್ನು ಪರಿಗಣಿಸಲಾಗಿದೆ. ಮೆಸಾಚ್ಯುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿಶ್ವದ ಅತ್ಯುತ್ತಮ ವಿವಿ ಎಂಬ ಹೆಗ್ಗಳಿಕೆ ಪಡೆದಿದೆ.
ಭಾರತದ ಪ್ರಗತಿ:
ಕಳೆದ ವರ್ಷ ಭಾರತದ 46 ವಿವಿಗಳು ಸ್ಥಾನ ಪಡೆದಿದ್ದವು. ಈ ವರ್ಷ ಇನ್ನೂ 8 ವಿವಿಗಳ ಸೇರ್ಪಡೆಯಾಗಿದ್ದು, ಸಂಖ್ಯೆ 54ಕ್ಕೇರಿದೆ. ಈ ಮೂಲಕ ಅತ್ಯುತ್ತಮ ವಿವಿ ಹೊಂದಿದ ಜಗತ್ತಿನ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕ (192 ವಿವಿ), ಬ್ರಿಟನ್ (90) ಹಾಗೂ ಚೀನಾ (72) ಮೊದಲ 3 ಸ್ಥಾನಗಳಲ್ಲಿವೆ. ಐಐಟಿ ದೆಹಲಿ ಭಾರತದ ವಿವಿಗಳ ಪೈಕಿ ಅತ್ಯುತ್ತಮ ವಿವಿ ಎಂಬ ಹೆಗ್ಗಳಿಕೆ ಪಡೆದಿದ್ದು, ಜಾಗತಿಕ ವಿವಿಗಳ ಪೈಕಿ 123ನೇ ಸ್ಥಾನ ಪಡೆದಿದೆ.
ಭಾರತದ ಟಾಪ್ 5 ವಿವಿಗಳು:
ಕ್ಯೂಎಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ವಿವಿಗಳಲ್ಲಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ದೆಹಲಿ (ಐಐಟಿಡಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿಬಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿಎಂ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಖರಗ್ಪುರ (ಐಐಟಿ-ಕೆಜಿಪಿ) ಹಾಗೂ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಮೊದಲ 5 ಸ್ಥಾನ ಪಡೆದಿವೆ.
ಕರ್ನಾಟಕದ 3 ವಿವಿಗಳಿಗೂ ಸ್ಥಾನ!:
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಹಾಗೂ ಬೆಂಗಳೂರಿನ ಕ್ರೈಸ್ಟ್ ವಿವಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…
ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…
ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…
ಬೀದರ.21.ಜೂನ್.25:- ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಗುರುವಾರ…
ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ.…
ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ…