ಬೀದರ.08.ಫೆಬ್ರುವರಿ.25: ಜನನಿ ಸುರಕ್ಷಾ ಯೋಜನೆ ಹಾಗೂ ಮಾತೃವಂದನಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲ ಹೆಣ್ಣು ಮಕ್ಕಳಿಗೂ ಜಾಗೃತಿ ಅರಿವು ಮೂಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬೀದರ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸಂಚರಿಸಿ ನವಜಾತ ಶಿಶುಗಳಿಗೆ ನೀಡುತ್ತಿರುವ ಲಸಿಕೆ ಕುರಿತು ಮಾಹಿತಿ ಪಡೆದರು.
ಪ್ರತಿ ಗ್ರಾಮ ಪಂಚಾಯತನಲ್ಲಿ ನಗರದ ಬಡಾವಣೆಗಳಲ್ಲಿ ಈ ಕುರಿತು ವಿಶೇಷ ಅರಿವು ಜಾಥಾ ಕಾರ್ಯಕ್ರಮಗಳು ಜರುಗಿಸಬೇಕೆಂದರು.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರತಿ ತಿಂಗಳು ವಿಶೇಷ ಮಾಹಿತಿ ಅರಿವು ಜಾಗೃತಿ ಆಂದೋಲನಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜನನಿ ಸುರಕ್ಷಾ ಯೋಜನೆಯಡಿ ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಯಾಗುವ ಪ್ರತಿ ಮಹಿಳೆಗೆ ಗ್ರಾಮೀಣ ಪ್ರದೇಶದಲ್ಲಿ ಮೊದಲ ಹಾಗೂ ಎರಡನೇ ಹೆರಿಗೆಗೆ ತಲಾ 700 ರೂ. ಹಾಗೂ ನಗರಗಳಲ್ಲಿ ರೂ 600 ಫಲಾನುಭವಿ ಖಾತೆಗೆ ಜಮೆ ಮಾಡಲಾಗುತ್ತಿದೆ.
ಮಾತೃವಂದನಾ ಕಾರ್ಯಕ್ರಮದಡಿ ಮೊದಲ ಹೆರಿಗೆಗೆ 5 ಸಾವಿರ ರೂ. ಎರಡು ಕಂತುಗಳಲ್ಲಿ ಹಾಗೂ 2ನೇ ಹೆರಿಗೆಯಲ್ಲಿ ಹೆಣ್ಣು ಮಗು ಜನಿಸಿದರೆ 6 ಸಾವಿರ ರೂ. ಒಂದೇ ಕಂತಿನಲ್ಲಿ ಜಮೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾತೃವಂದನಾ ಯೋಜನೆಯಡಿ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ 10629 ಮಹಿಳೆಯರು ನೋಂದಣಿಯಾಗಿದ್ದಾರೆ.
ಈ ಪೈಕಿ ಪ್ರಥಮ ಬಾರಿಗೆ ಗರ್ಭಿಣಿಯಾದ 6592 ಮಹಿಳೆಯರಿಗೆ 5 ಸಾವಿರ ರೂ. ನಂತೆ 3.29 ಕೋಟಿ ರೂ. ಹಾಗೂ ಎರಡನೇ ಹೆರಿಗೆಗೆ ಹೆಣ್ಣು ಮಗುವಾದಲ್ಲಿ 6 ಸಾವಿರಗಳಂತೆ 3298 ಫಲಾನುಭವಿಗಳಿಗೆ 1.97 ಕೋಟಿ ರೂ.ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
ಎಲ್ಲಾ ಮಹಿಳೆಯರು ನವಜಾತ ಶಿಶುಗಳಿಗೆ ರೋಗ ತಡೆಗಟ್ಟಲು ಬಾಲಕ್ಷಯ, ರೋಟಾವೈರಸ್ ಅತಿಸಾರ ಭೇದಿ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ಹೆಚ್ಇನ್ಫ್ಲಎನ್ಜ ಬಿ ಮತ್ತು ಹೆಪಟೈಟಿಸ್ ಬಿ, ನ್ಯೂಮೊಕೊಕಲ್ ಕಾಯಿಲೆ, ರೋಟಾವೈರಸ್ ಅತಿಸಾರ ಭೇದಿ, ದಡಾರ ಮತ್ತು ರುಬೆಲ್ಲಾ, ನ್ಯೂಮೊಕೊಕಲ್ ಕಾಯಿಲೆ, ಮೆದುಳು ಜ್ವರ, ಇರುಳು ಕುರುಡು ಈ ಎಲ್ಲಾ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಈವರೆಗೆ 26588 ಮಕ್ಕಳಿಗೆ ಎಲ್ಲಾ ತರಹದ ಬಿಸಿಜಿ, ಹಿಪಾಟಿಟಿಸ್, ಪೋಲಿಯೋ, ರೋಟಾವೈರಸ್ ಸೇರಿದಂತೆ ಎಲ್ಲಾ ಲಸಿಕೆಗಳನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲೆಯ ಪ್ರತಿಯೊಬ್ಬ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…