ಬೀದರ.15.ಜನವರಿ.25,:- 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು (ಸಂಪುಟ ದರ್ಜೆ ಸಚಿವರ ಸ್ಥಾನಮಾನ) ಮತ್ತು ಸದಸ್ಯರುಗಳು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿ, ಸಂಪನ್ಮೂಲಗಳ ಕ್ರೋಢೀಕರಣ, ಹಂಚಿಕೆ ಮತ್ತು ಮೂಲ ಸೌಕರ್ಯ ಹಾಗೂ ಸೇವೆಗಳ ಒದಗಿಸುವಿಕೆಯಲ್ಲಿ ತಾಂತ್ರಿಕ ಕೌಶಲ್ಯ, ಸಾಮರ್ಥ್ಯ ಇತ್ಯಾದಿಗಳನ್ನು ಅಧ್ಯಯನ ಮಾಡುತ್ತಿರುವುದರಿಂದ ಜನವರಿ. 17 ಮತ್ತು 18 ರಂದು ಬೀದರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಪ್ರವಾಸ ಕಾರ್ಯಕ್ರಮ ವಿವರ: ಅವರು ಜನವರಿ.17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬೀದರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
(ಬೆಳಿಗ್ಗೆ 10.30 ರಿಂದ 12 ರವರೆಗೆ ಅಧಿಕಾರಿಗಳಿಂದ ವಿಷಯ ಮಂಡನೆ (ಪಿಪಿಟಿ ಮೂಲಕ), ಮಧ್ಯಾಹ್ನ 12 ರಿಂದ 1.30 ರವರೆಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ). ನಂತರ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಬೀದರ ನಗರಸಭೆ ಭೇಟಿ ನೀಡಿ ಚುನಾಯಿತಿ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಜನವರಿ.18 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಭಾಲ್ಕಿ ಪುರಸಭೆಗೆ ಭೇಟಿನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಲ ಜೊತೆ ಚರ್ಚೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 12 ರಿಂದ 1.30 ರವರೆಗೆ ಭಾಲ್ಕಿ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತ ಭೇಟಿ (ಬೀದರ್ ಮಾರ್ಗ ಮಧ್ಯ) ನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 3 ರಿಂದ 4.30 ರವರೆಗೆ ಬೀದರ ಜಿಲ್ಲಾ ಪಂಚಾಯತಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ಅವರು ತಿಳಿಸಿದ್ದಾರೆ.