ಜಾಗರೂಕತನದಿಂದ ಅಪಘಾತ ರಹಿತಚಾಲನೆ ಮಾಡಿ,-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!


ಬೀದರ.23.ಜನವರಿ.25:- ಇಂದು ಬೀದರ ಜಿಲ್ಲಾ ಅಧಿಕಾರಿ ಅವರ ಕಚೇರಿಯಲ್ಲಿ ನೆಯುತ್ತಿರುವ ಕಾರ್ಯಕ್ರಮದದ ವಿವರ.ನೂರು ಪ್ರಯಾಣಿಕರನ್ನು ಹೊತ್ತು ಒಯ್ಯುವ ರಸ್ತೆ ಸಾರಿಗೆ ನಿಗಮದ ಚಾಲಕರು ಜವಾಬ್ದಾರಿಯಿಂದ ಜಾಗರೂಕತನದಿಂದ ಅಪಘಾತರಹಿತವಾಗಿ ಚಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ನಗರದ ಹಳೆಯ ಬಸ್ ನಿಲ್ದಾಣದಲ್ಲಿಂದ ಬೀದರ ಮಾರ್ಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಮ್ಮಿಕೊಂಡ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಯೋಜಿಸಲಾದ ಹೊರಗುತ್ತಿಗೆಯ ಚಾಲಕ ಅಭ್ಯರ್ಥಿಗಳಿಗೆ ಕಾರ್ಯಾದೇಶ ವಿತರಿಸಿ ಅವರು ಮಾತನಾಡುತ್ತಿದ್ದರು.


ಪ್ರತಿ ಚಾಲಕರು ಪ್ರಾಮಾಣಿಕತೆಯಿಂದ ಮೈಯೆಲ್ಲಾ ಕಣ್ಣಾಗಿಸಿಕೊಂಡು ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಸೇವೆ ಸಲ್ಲಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.


‘ವೇಗಮಿತಿ’ ನಿಯಂತ್ರಣ, ತಪ್ಪು ಚಾಲನೆ ಕಡೆ ಗಮನವಿಡಬೇಕು. ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದರು.


ಗುಲಬರ್ಗಾ ರಸ್ತೆ ಸಾರಿಗೆ ನಿಗಮದ ವಿಭಾಗದ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಚಪ್ಪ ಅವರು ಮಾತನಾಡಿ, ಇಡೀ ವಿಭಾಗದಲ್ಲಿ ಪ್ರಥಮ ಬಾರಿಗೆ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ಹೊರಗುತ್ತಿಗೆ ಚಾಲಕರನ್ನು ನಿಯೋಜಿಸಲಾಗುತ್ತಿದೆ. ಈ ಹಿಂದೆ ವಿವಿಧ ಏಜೇನ್ಸಿಗಳಿಂದ ನಿಯೋಜಿಸಲಾದಾಗ ವಿವಿಧ ರೀತಿಯ ತೊಂದರೆಗಳನ್ನು ಚಾಲಕರು ಅನುಭವಿಸುತ್ತಿದ್ದರು.

ಆದ್ದರಿಂದ ಈ ಬಾರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಾರದರ್ಶಕವಾಗಿ ರೋಸ್ಟರ್ ಪ್ರಕಾರ ಮೆರಿಟ್ ಆಧಾರದ ಮೇಲೆ 150 ಜನ ಚಾಲಕ ಹಾಗೂ 50 ಜನ ಮೆಕ್ಯಾನಿಕ್‍ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಚಾಲಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ತಿಳಿಸಿದರು.


ಈ ಸಂದರ್ಭಧಲ್ಲಿ ಬೀದರ ವಿಭಾಗೀಯ ಸಾರಿಗೆ ನಿಯಂತ್ರಣ ಅಧಿಕಾರಿ ಆನಂದ ಭದ್ರಕಲೆ, ಮುಖ್ಯ ಭದ್ರತಾಧಿಕಾರಿ ಚಂದ್ರಕಾಂತ ಫುಲೇಕರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

2 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

3 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

3 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

3 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

3 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

3 hours ago