ನಾಳೆ.16.ಏಪ್ರಿಲ್.25:- ರಾಜ್ಯದಲ್ಲಿ ಒಳಮೀಸಲಾತಿ ಕುರಿತು ಜಾತಿ ಗಣತಿ ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಗೊಂದಲವನ್ನು ಹುಟ್ಟುಹಾಕಿರುವ ವಿವಾದಿತ ಜಾತಿ ಗಣತಿ ವರದಿ ಕುರಿತ ಚರ್ಚೆ ನಡೆಯಲಿವೆ.
ಕಾಂತರಾಜು ಸಮಿತಿಯಿಂದ ವರದಿಯನ್ನು ಈಗಾಗಲೇ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ ಚರ್ಚೆಗೆ ಏಪ್ರಿಲ್ 17ಕ್ಕೆ ಚರ್ಚೆಗೆ ಸ್ವತಃ ಮುಹೂರ್ತ ಇಟ್ಟಿದ್ದಾರೆ.
ಇನ್ನು ಈ ವರದಿಯದ್ದು ಎನ್ನಲಾದ ಜಾತಿವಾರು ಜನಸಂಖ್ಯೆ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಮತ್ತೊಮ್ಮೆ ವೈಜ್ವಾನಿಕವಾಗಿ ಜಾತಿಗಣತಿ ನಡೆಯಬೇಕು ಎಂದಿದ್ದಾರೆ.
ಹೀಗೆ ಭಾರೀ ಚರ್ಚೆ ಹುಟ್ಟುಹಾಕಿರುವ ಜಾತಿಗಣತಿ ವರದಿ ಬಗ್ಗೆ ಬಿಸಿ ಪಾಟೀಲ್ ಮಾತನಾಡಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಮಠಾಧೀಶರು ಈ ನೇತೃತ್ವದ ನೇತೃತ್ವ ವಹಿಸಬೇಕು. ಅವರೇ ಬಂದು ಎಲ್ಲರನ್ನೂ ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕು. ಪ್ರತಿಭಟನೆ ನಡೆದರೆ ಭಾಗವಹಿಸುತ್ತೇನೆ’ ಎಂದಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಬಿಸಿ ಪಾಟೀಲ್ ‘ಹಠಕ್ಕೆ ಬಿದ್ದು ಜಾತಿಗಣತಿಯನ್ನು ಜಾರಿಗೆ ತರಲು ಹೋದರೆ ಮುಂದೆ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತೆ. ರಕ್ತಕ್ರಾಂತಿಯಾಗುತ್ತೆ’ ಎಂದು ಎಚ್ಚರಿಸಿದರು. ಇನ್ನು ಲಿಂಗಾಯತ ಹಾಗೂ ವೀರಶೈವ ಬೇರೆ ಬೇರೆ ಅಲ್ಲ, ಬೇರೆ ಮಾಡಲು ಯತ್ನಿಸಿದರೂ ಸಾಧ್ಯವಾಗಲ್ಲ ಎಲ್ಲರೂ ಒಂದೇ ಎಂದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…