ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ.

ಬೆಂಗಳೂರು.15.ಫೆ.25:- ಇಂದು ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ

ರಾಜ್ಯಾಧ್ಯಂತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಯಾಗದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು.

ಈ ಸಮಸ್ಯೆ ನೀಗಿಸಿ, ವಿದ್ಯಾರ್ಥಿಗಳಿಗೆ ಈ ಪ್ರಮಾಣ ಪತ್ರ ವಿತರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಈ ಸಂಬಂಧ ಕಂದಾಯ ಇಲಾಖೆಯಿಂದ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ: 10.02.2025 ರಿಂದ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ ಎಂದಿದೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಕೋರಿಕೆಯ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ರಾಜಸ್ವ ನಿರೀಕ್ಷಕರುಗಳು ಕ್ಷೇತ್ರ ತಪಾಸಣೆಯನ್ನು ನಡೆಸಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಪತ್ರಗಳನ್ನು ವಿತರಿಸಲು ಜಿಲ್ಲೆಯ ಎಲ್ಲಾ ತಹಸೀಲ್ದಾರ್ ರವರಿಗೆ ಸೂಚನೆಯನ್ನು ನೀಡಲಾಗಿರುತ್ತದೆ ಎಂದು ಹೇಳಿದೆ.

ಸಾರ್ವಜನಿಕರು ಆಯಾ ತಾಲೂಕಿನ ತಹಸೀಲ್ದಾರ್ ರವರನ್ನು ಸಂಪರ್ಕಿಸಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಪಡೆಯತಕ್ಕದ್ದು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಪತ್ರಗಳನ್ನು ಪಡೆಯಲು ಅನಾನುಕೂಲತೆ ಉಂಟಾದಲ್ಲಿ ಅಥವಾ ಯಾವುದೇ ಅಡಚಣೆಯಾದಲ್ಲಿ, ದೂರವಾಣಿ ಸಂಖ್ಯೆ: 8277862938 ನ್ನು ( ರಾಕೇಶ್, AJSK ಸಮಾಲೋಚಕರು) ಸಂಪರ್ಕಿಸುವಂತೆ ತಿಳಿಸಿದೆ.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

56 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

60 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

1 hour ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

1 hour ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

1 hour ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago