ಬೀದರ,06 ಡಿಸೆಂಬರ್24 :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರುವ ಗ್ರಾಮ ಪಂಚಾಯತ ಪಿ.ಡಿ.ಓ. ಗಳಿಗೆ ಜಾನುವಾರು ಗಣತಿ ಸಮಯದಲ್ಲಿ ಎಣಿಕೆದಾರರು ಹಾಗೂ ಮೇಲ್ವಿಚಾರಕರು ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಪಂಚಾಯತ ವಾಟರ್ ಮ್ಯಾನ್ ಹಾಗೂ ಇತರೆ ಸಿಬ್ಬಂದಿಗಳು ಗಣತಿದಾರರಿಗೆ ಸಹಕಾರದೊಂದಿಗೆ ಜಿಲ್ಲೆಯ ಗ್ರಾಮಸ್ಥರು, ಸಾರ್ವಜನಿಕರು ಹಾಗೂ ರೈತಬಾಂಧವರಲ್ಲಿರುವ ಜಾನುವಾರುಗಳ ಸಂಪೂರ್ಣ ಮಾಹಿತಿಯನ್ನು ನೀಡಿ ಜಾನುವಾರು ಗಣತಿ ಕಾರ್ಯ ಯಶ್ವಸಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೂಚಿಸಿದರು.
ಅವರು ಇಂದು ಡಿ.6 ರಿಂದ ಮಾರ್ಚ.31 ರವರೆಗೆ ರಾಷ್ಟಾçದ್ಯಂತ, ರಾಜ್ಯಾದ್ಯಂತ, ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ 21ನೇ ಜಾನುವಾರು ಗಣತಿ ಕಾರ್ಯಕ್ರಮಕ್ಕೆ ತಮ್ಮ ನಿವಾಸದಲ್ಲಿ ಚಾಲನೆ ನೀಡಿ ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ನಡೆದ ಜಾನುವಾರು ಗಣತಿ ಪ್ರಕಾರ ಔರಾದ (ಬಿ), ಭಾಲ್ಕಿ, ಬೀದರ, ಬಸವಕಲ್ಯಾಣ, ಹುಮನಾಬಾದ, ಚಿಟಗುಪ್ಪ, ಹುಲಸೂರ ಹಾಗೂ ಕಮಲನಗರ ನಡೆದ ಜಾನುವಾರು ಗಣತಿ ಪ್ರಕಾರ ದನಗಳು (173634), ಎಮ್ಮೆ (125510), ಕುರಿ (85948), ಮೇಕೆ (182854), ಹಂದಿ (20838) ಒಟ್ಟು (588784) ಹಾಗೂ ಕುಕ್ಕುಟ (734095) ಇರುತ್ತವೆಂದರು. ಅದೇ ರೀತಿ ಈ ಜಾನುವಾರು ಗಣತಿ ನಡೆಯುತ್ತಿದೆಂದರು.
ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ಡಾ. ನರಸಪ್ಪಾ ಎ.ಡಿ, ಡಾ. ಗೌತಮ ಅರಳಿ, ಡಾ. ಉದಯಕುಮಾರ ಡಾ. ವಿಕ್ರಂ ಚಾಕೊತೆ ಡಾ. ಜಗದೀಶ ಬಿರಾದಾರ ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…