ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ ಎಂದು ಕೇಂದ್ರಕ್ಕೆ ಶ್ರೀಫಾರಸ್ಸು ಮಾಡಿ ಒತ್ತಾಯಿಸಿತ್ತು ಅದರಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ ವರದಿಯಂತೆ ಶೇ೬% ರಷ್ಟು ಒಳಮೀಸಲಾತಿ ಕಲ್ಪಿಸಬೇಕೆಂದು ಬೀದರ ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಬಸವರಾಜ ಪವಾರ ವಕೀಲರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಆಯೋಗದ ವರದಿಯಂತೆ ಲಂಬಾಣಿ ,ಭೋವಿ, ಕೋರವ ಮತ್ತು ಕೊರಚ ಸಮುದಾಯಗಳಿಗೆ ನ್ಯಾಯಯುತವಾಗಿರುವಂತೆ ಶೇ೬% ರಷ್ಟಿ ಮೀಸಲಾತಿ ನೀಡಬೇಕು.೧೫೦ ಕೋಟಿ ರೂ.ವೆಚ್ಚದಲ್ಲಿ ಏಕ ಸದಸ್ಯ ಆಯೋಗವು ೧೦೧ ಪರಿಶಿಷ್ಟ ಜಾತಿಗಳ ಅಧ್ಯಾಯನ ನಡೆಸಿ ಒಳ ಮೀಸಲಾತಿ ದೊರಕುವಂತೆ ಆಯೋಗವು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಈ ೪ ಸಮುದಾಯಗಳಿಗೆ ಶೇ ೧೫ರಿಂದ ಶೇ೧೭ ರಷ್ಟು ಒಳ ಮೀಸಲಾತಿ ನೀಡಬೇಕೆಂದು ಶೀಪಾರಸ್ಸು ಮಾಡಿತು ಆದರೆ ಈಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಆದ್ಯತೆ ನೀಡುವಂತೆ ಕಾಣುತ್ತಿಲ್ಲ. ಎತನ ಮಧ್ಯೆ ಪರಿಶಿಷ್ಟ ಜಾತಿಗಳಾದ ಎಡ ಮತ್ತು ಬಲ ಗಳಿಗೆ ಸಮಾನ ಮೀಸಲಾತಿ ನೀಡಿ ಈ ೪ ಸಮುದಾಯಗಳಿಗೆ ಅನ್ಯಾಯ ಮಾಡುವ ಹುನ್ನಾರ ಮತ್ತು ಕೆಲ ಕಾಂಗ್ರೇಸ್ ಸರ್ಕಾರವು ಸಚಿವರ ರಹಸ್ಯ ಸಭೆಗಳು ನಡೆದಿವೆ ಎಂದು ತಿಳಿದು ಬಂದಿದೆ.
ಹೀಗಾದಲ್ಲಿ ಬಂಜಾರ ,ಭೋವಿ, ಕೋರವ ಮತ್ತು ಕೊರಚ ಪರಿಶಿಷ್ಟ ಜಾತಿಗಳಿಗೆ ತೀವ್ರ ಅನ್ಯಾಯವಾಗಬಹುದಾಗಿದೆ.
ಈ ೪ ಸಮುದಾಯಗಳು ಅತ್ಯಂತ ಬಡತನ ರೇಖೆಗಿಂತಾಗಿದ್ದು ಆರ್ಥಿಕವಾಗಿ ಸಾಮಾಜಿಕವಾಗಿ ,ಶೈಕ್ಷಣಿಕವಾಗಿ ಹಿಂದುಳಿದಿರುತ್ತವೆ. ಬದುಕಲು ಬಲು ಕಷ್ಟ ಪಡುತ್ತಿರುವ ಈ ಸಮುದಾಯಗಳಿಗೆ ಸರ್ವಾಂಗೀಣ ಪ್ರಗತಿಗಾಗಿ ಶೇ೬%ರಷ್ಟು ಮೀಸಲಾತಿಯನ್ನು ಕೊಡಬೇಕೆಂದು ಬಸವರಾಜ ಪವಾರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿ…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ್ಯಾಲಿಗೆ ಸ್ಥಾನಿಕ…