ಬೀದರ.09.ಜುಲೈ.25:- ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡವು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಪ್ರಜಾ ಸೌಧ ನಿರ್ಮಾಣ ಕಾರ್ಯವು ಪ್ರಾರಂಭಗೊಳ್ಳಿಸಬೇಕಾಗಿರುವುದರಿoದ, ಸದರಿ ಸಂಕಿರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಛೇರಿಗಳನ್ನು ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯವಾಗುವವರೆಗೆ ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಛೇರಿಗಳನ್ನು ಜುಲೈ.10 ರಂದು ಈ ಕೆಳಕಂಡ ಸ್ಥಳಗಳಲ್ಲಿ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳಾಂತರಗೊಣoಡಿರುವ ಕಚೇರಿಗಳ ವಿವರ: ಬೀದರ ಜಿಲ್ಲಾಧಿಕಾರಿಗಳ ಕಛೇರಿಯನ್ನು ಗಾಂಧಿ ಭವನ ಚಿಕ್ಕಪೇಟ ಬೀದರ ಇಲ್ಲಿಗೆ ಸ್ಥಳಾಂತರಿಸಲಾಗಿದೆ.
ಸಹಾಯಕ ಆಯುಕ್ತರ ಕಛೇರಿಯನ್ನು -ಕೇಂದ್ರ ಗ್ರಂಥಾಲಯ ಕಟ್ಟಡ ಮೊದಲನೇ ಮಹಡಿ ಜನವಾಡ ರಸ್ತೆ ಬೀದರ, ವಿಶೇಷ ಭೂ ಸ್ವಾಧಿನಾಧಿಕಾರಿಗಳ ಕಛೇರಿಯನ್ನು-ಉಪ ನಿರ್ದೇಶಕರು ರೇಷ್ಮೆ ಇಲಾಖೆ ಕಟ್ಟಡ ಮೊದಲನೇ ಮಹಡಿ ಬೀದರ, ಉಪ ನೋಂದಣಾಧಿಕಾರಿಗಳ ಕಛೇರಿಯನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗರಾಹಕರ ವ್ಯವಹಾರಗಳ ಇಲಾಖೆಂನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಉಪನಿರ್ದೇಶಕರು ಭೂ ದಾಖಲೆಗಳ ಇಲಾಖೆಯನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಸಹಾಯಕ ನಿರ್ದೇಶಕರು ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆಯನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಜಿಲ್ಲಾ ವಕ್ಫ ಸಲಹಾ ಸಮಿತಿ ಬೀದರ ಕಚೇರಿಯನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಕಾರ್ಯದರ್ಶಿಗಳು, ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ, ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿಗಳ ಕಛೇರಿಯನ್ನು-ಮೌಲಾನಾ ಆಜಾದ್ ಭವನ ಚಿಕ್ಕಪೇಟ ಬೀದರ, ಪ್ರವಾಸೋದ್ಯಮ ಇಲಾಖೆಯನ್ನು-ಕನ್ನಡ ಭವನ ಚಿಕ್ಕಪೇಟ ಬೀದರ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ ಕಛೇರಿಯನ್ನು-ಬೊಮ್ಮಗೊಂಡೇಶ್ವರ ಸಮುದಾಯ (ಗೊಂಡ) ಭವನ ಚಿಕ್ಕಪೇಟ ಬೀದರ ಇಲ್ಲಿಗೆ ಸ್ಥಳಾಂತರಿಸಲಾಗಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…