09/06/2025 1:41 AM

Translate Language

Home » ಲೈವ್ ನ್ಯೂಸ್ » ಜಿಲ್ಲಾ,ತಾಲೂಕು ಪಂಚಾಯತ ಚುನಾವಣೆ: ಇಂದು ಉಚ್ಯ ನ್ಯಾಯಾಲನಲ್ಲಿ ವಿಚಾರಣೆ.!

ಜಿಲ್ಲಾ,ತಾಲೂಕು ಪಂಚಾಯತ ಚುನಾವಣೆ: ಇಂದು ಉಚ್ಯ ನ್ಯಾಯಾಲನಲ್ಲಿ ವಿಚಾರಣೆ.!

Facebook
X
WhatsApp
Telegram

ಬೆಂಗಳೂರು.17.ಫೆ.25: ಜಿಲ್ಲಾ ಪಂಚಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆ ರಾಜ್ಯದಲ್ಲಿ ಮೂರು ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಅತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸುವ ಸಂಬಂಧ ಸೋಮವಾರ ಉಚ್ಯ ನ್ಯಾಯಾಲನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿದೆ.

ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ.

ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದ್ದು.

ಮೀಸಲಾತಿ ಪಟ್ಟಿ ಆದಷ್ಟು ಬೇಗ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಅರ್ಜಿಯು ಸೋಮವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

ಚುನಾವಣೆಗೆ ಎಲ್ಲರೂ ಸಜ್ಜಾಗಿ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು.

– ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!