ಜಿಲ್ಲಾಧಿಕಾರಿಗಳ ತಾತ್ಕಾಲಿಕ ಕಛೇರಿಗೆ ಬಸ್ ಓಡಿಸಿ

ಬೀದರ.01.ಆಗಸ್ಟ.25:- ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡವು ಶಿಥಿಲಗೊಂಡಿರುವುದರಿoದ ಬೀದರ ನಗರದ ಚಿಕ್ಕಪೇಟ್ ಬಳಿ ಇರುವ ಗಾಂಧಿ ಭವನಕ್ಕೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡಕ್ಕೆ ಹೋಗಿ ಬರಲು ಸಾರ್ವಜನಿಕರಿಗೆ ತೀವ್ರ ತೊಂದರೆಯುoಟಾಗುತ್ತಿದೆ.

ಆಟೋ ಚಾಲಕರು ಹೆಚ್ಚಿನ ಹಣ ಪಡೆಯುತ್ತಿರುವುದರಿಂದ ಜನತೆಗೆ ಕಷ್ಟ ಅನುಭವಿಸಬೇಕಾಗುತ್ತಿದೆ. ಆದರಿಂದ ಮಾನ್ಯ ಜಿಲ್ಲಾಧಿಕಾರಿಗಳು ತಕ್ಷಣವೇ ತಾತ್ಕಾಲಿಕ ಕಛೇರಿಗೆ ಎನ್.ಈ.ಕೆ.ಆರ್.ಟಿ.ಸಿ ಬಸ್ ಅಥವಾ ಪ್ರವಾಸೋಧ್ಯಮ ಬಸ್‌ಗಳನ್ನು ಓಡಿಸುವಂತೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಬಸ್ ರೂಟ್ – ೧
ಬಸ್ ಸಂಚಾರ ನಗರ ಕೇಂದ್ರ ಬಸ್ ನಿಲ್ದಾಣದಿಂದ ಮಡಿವಾಳ ಚೌಕ್, ಡಾ.ಸಿದ್ದಾರೆಡ್ಡಿ ಆಸ್ಪತ್ರೆ, ಸಿದ್ಧಾರ್ಥ ಕಾಲೇಜು ಕ್ರಾಸ್, ನಾವದಗೇರಿ, ವಿಜಯ ಕಾಲೋನಿ, ಚಿಕ್ಕಪೇಟ್-ಗುರುದ್ವಾರಾ ಕ್ರಾಸ್ ಮೂಲಕ ಗಾಂಧಿ ಭವನದಲ್ಲಿರುವ ಡಿ.ಸಿ ಕಛೇರಿ ವರೆಗೆ ಓಡಿಸಬೇಕು.

ಬಸ್ ರೂಟ್ – ೨
ಇನ್ನೊಂದು ರೂಟ್ ಕೇಂದ್ರ ಬಸ್ ನಿಲ್ದಾಣದಿಂದ ಖಂಡ್ರೆ ಪೆಟ್ರೋಲ್ ಪಂಪ್, ರಂಗ ಮಂದಿರ, ಕನ್ನಡಾಂಬೆ ರೋಟರಿ ಚೌಕ್, ಹಳೆ ಬಸ್ ನಿಲ್ದಾಣ, ಶಿವಾಜಿ ಚೌಕ್, ಡಾ.ಬಿ.ಆರ್.ಅಂಬೇಡ್ಕರ್ ಚೌಕ್, ಕೇಂದ್ರ ಗಂಥಾಲಯ, ಸಿದ್ಥಾರ್ಥ ಕಾಲೇಜು,  ನಾವದಗೇರಿ, ವಿಜಯ ಕಾಲೋನಿ, ಚಿಕ್ಕಪೇಟ್-ಗುರುದ್ವಾರಾ ಕ್ರಾಸ್ ಮೂಲಕ ಗಾಂಧಿ ಭವನದಲ್ಲಿರುವ ಡಿ.ಸಿ ಕಛೇರಿ ವರೆಗೆ ಸಿಟಿ ಬಸ್‌ಗಳನ್ನು ಸಂಚರಿಸುವAತೆ ವ್ಯವಸ್ಥೆ ಮಾಡಿಸಬೇಕೆಂದು ಭಾವಿಕಟ್ಟಿ ಕೋರಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago