ಬೀದರ.11.ಫೆಬ್ರುವರಿ.25:-ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಅವರು ಮಂಗಳವಾರದಂದು ಬೀದರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕೊಣೆ ವೀಕ್ಷಿಸಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕುಡಿಯುವ ನೀರು, ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿ ಅಲ್ಲಿನ ರೋಗಿಗಳಿಗಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು.

ಬ್ರಿಮ್ಸ್ನ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದು ಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾ ಕೌಜಲ್ಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
