10/08/2025 4:05 AM

Translate Language

Home » ಲೈವ್ ನ್ಯೂಸ್ » ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Facebook
X
WhatsApp
Telegram

ಕೊಪ್ಪಳ.20.ಜೂನ್.25:-ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜೂನ್ 21 ಮತ್ತು 22 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಸಚಿವರು ಜೂ. 21ರಂದು ಸಂಜೆ 4 ಗಂಟೆಗೆ ರಾಯಚೂರಿನಿಂದ ರಸ್ತೆಯ ಮೂಲಕ ಹೊರಟು, ಸಂಜೆ 6ಕ್ಕೆ ಕೊಪ್ಪಳ ಜಿಲ್ಲೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.


ಜೂ. 22ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರ ಗ್ರಾಮಕ್ಕೆ ಆಗಮಿಸಿ, ದಿವಂಗತ ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರ ಜೊತೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಕ್ಕೆ ಅಲ್ಲಿಂದ ನಿರ್ಗಮಿಸಿ, ಸಂಜೆ 4 ಗಂಟೆಗೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.


ಜೂ.23ಕ್ಕೆ ಬೆಳಿಗ್ಗೆ 9 ಗಂಟೆಗೆ ಕಾರಟಗಿಯಿಂದ ರಾಯಚೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD