ಬೀದರ:09.ಜನವರಿ.25:- ಬೀದರ ಜಿಲ್ಲೆಯ 2025-26 ನೇ ಸಾಲಿಗಾಗಿ ರಾಜ್ಯದ ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಕಿರಿಯರ ಮತ್ತು ಹಿರಿಯರ ವಿಭಾಗದಲ್ಲಿ ಅಥ್ಲೇಟಿಕ್ಸ್, ಹಾಕಿ, ಬಾಸ್ಕೇಟ್ ಬಾಲ್, ಜಿಮ್ನಾಸ್ಟಿಕ್, ವಾಲಿಬಾಲ್, ಫುಟ್ಬಾಲ್, ಜುಡೋ, ಕುಸ್ತಿ ಮತ್ತು ಸೈಕ್ಲಿಂಗ್ನಲ್ಲಿ ಕ್ರೀಡೆಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಹಾಗೂ ಜಿಲ್ಲಾ ಕ್ರೀಡಾನಿಲಯಕ್ಕೆ ಹಾಗೂ ಅಥ್ಲೇಟಿಕ್ಸ್,ಬಾಸ್ಕೇಟ್ಬಾಲ್ ಮತ್ತು ವಾಲಿಬಾಲ್ಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ.
ಈ ಪ್ರಕ್ರಿಯೆಯನ್ನು ಈ ಕೆಳಕಂಡ ದಿನಗಳಂದು ಬೆಳಿಗ್ಗೆ 10 ಗಂಟೆಯಿAದ ಆಯಾ ತಾಲೂಕಿನಲ್ಲಿ ಇಲಾಖಾ ತರಬೇತುದಾರರು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಿದ್ದಾರೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೇ ದಿನಾಂಕ, ಸ್ಥಳ ಮತ್ತು ತರಬೇತಿದಾರರ ವಿವರ:-
ಜನವರಿ.16 ರಂದು ಬಸವಕಲ್ಯಾಣ ತಾಲ್ಲೂಕಾ ಕ್ರೀಡಾಂಗಣದಲ್ಲಿ,
ಜನವರಿ.17 ರಂದು ಹುಮನಾಬಾದ ತಾಲ್ಲೂಕಾ ಕ್ರೀಡಾಂಗಣದಲ್ಲಿ,
ಜನವರಿ.18 ರಂದು ಭಾಲ್ಕಿ ತಾಲ್ಲೂಕ ಕ್ರೀಡಾಂಗಣದಲ್ಲಿ,
ಜನವರಿ.20 ರಂದು ಔರಾದ ತಾಲ್ಲೂಕಾ ಕ್ರೀಡಾಂಗಣದಲ್ಲಿ ಹಾಗೂ
ಜನವರಿ.21 ರಂದು ನೆಹರು ಜಿಲ್ಲಾ ಕ್ರೀಡಾಂಗಣ ಬೀದರದಲ್ಲಿ ತರಬೇತಿ ನಡೆಯಲಿವೆ.
ಅಭ್ಯರ್ಥಿಗಳ ಆಯ್ಕೆ ಮಾಡುವ ತರಬೇತಿದಾರರಾದ ನೂರ್ ಅಲೀಂ ಎ.ಎಸ್. ಅಥ್ಲೇಟಿಕ್ ತರಬೇತಿದಾರರು (ಮೊ. 9538116814),
ರಾಘವೇಂದ್ರ ಬಾಸ್ಯೇಟ್ಬಾಲ್ ತರಬೇತುದಾರರು (ಮೊ:8310585580) ಹಾಗೂ
ಜೈಪ್ರಕಾಶ ವಾಲಿಬಾಲ್ ತರಬೇತುದಾರರು. (ಮೊ: 9591609691)
ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರ ಕಛೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಅಥವಾ ದೂರವಾಣಿ ಸಂ: 9538116814, 8310585580 ಮತ್ತು 9591609691 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…