
ಬೀದರ.03.ಮಾರ್ಚ.25:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, “ಕ್ರೀಡೆ ಭಾವೈಕ್ಯತೆ ತರುವುದರ ಜೊತೆಗೆ ಶಾರೀರಿಕ ಮತ್ತು ಮಾನಸಿಕ ಸದೃಢತೆಯನ್ನು ನೀಡುತ್ತದೆ. ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಹಿಂದೆ ಇಲ್ಲ; ಅವರು ತಮ್ಮ ಸಾಮರ್ಥ್ಯವನ್ನು ಕ್ರೀಡಾ ಕ್ಷೇತ್ರದಲ್ಲೂ ಸಾಬೀತುಪಡಿಸಿದ್ದಾರೆ. ಸರ್ಕಾರ ಮಹಿಳಾ ಕ್ರೀಡಾಪಟುಗಳಿಗಾಗಿ ವಿವಿಧ ಯೋಜನೆಗಳ ಮೂಲಕ ಅವರ ಪ್ರೋತ್ಸಾಹಕ್ಕೆ ಬದ್ಧವಾಗಿದೆ,” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಅಧಿಕಾರಿಗಳು, ಕ್ರೀಡಾಪಟು ಮಹಿಳೆಯರು, ಕ್ರೀಡಾ ಪ್ರೇಮಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.
