09/06/2025 1:47 AM

Translate Language

Home » ಲೈವ್ ನ್ಯೂಸ್ » ಜಿಲ್ಲಾ ವಕೀಲರ ಸಂಘದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ

ಜಿಲ್ಲಾ ವಕೀಲರ ಸಂಘದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ

Facebook
X
WhatsApp
Telegram

ಬೀದರ.05.ಮಾರ್ಚ.25:-ಬೀದರ ಜಿಲ್ಲಾ ವಕೀಲರ ಸಂಘದ ಸದಸ್ಯರು ಆಯೋಜಿಸಿದ್ದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಭಾಗವಹಿಸಿ, ಲಿಫ್ಟ್ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ವಕೀಲರ ಗೌರವವನ್ನು ಸ್ವೀಕರಿಸಿದರು.



ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಅತೀವ ಮುಖ್ಯ, ನ್ಯಾಯಕ್ಕಾಗಿ ಹೋರಾಡುವ ವಕೀಲರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಹಕಾರ ನೀಡುವುದಾಗಿ ತಿಳಿಸಿದರು.



ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಎ.ಎಂ. ಆನಂದಶಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ್ ಸೇರಿದಂತೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರು ಹಾಗೂ ಅನೇಕರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!