ಬೀದರ.29ಜನವರಿ.25:-ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಪ್ರಸವಪೂರ್ವ ಲಿಂಗ ಪರೀಕ್ಷೆ ವಿಧಾನ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ತಿಳಿಸಿದರು.
ಡಿಎಚ್ಓ ಕಚೇರಿ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪಿ.ಸಿ. ಹಾಗೂ ಪಿ.ಎನ್.ಡಿ.ಟಿ. ಕಾಯ್ದೆ 1994 (ಗರ್ಭಧಾರಣಾ ಹಾಗೂ ಪ್ರಸನ ಪೂರ್ವ ಪತ್ತೆ ತಂತ್ರ ವಿಧಾನಗಳ ಅಧಿನಿಯಮ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮೂರು ತಿಂಗಳಿಗೊಮ್ಮೆ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳಿಗೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೊಂಗ್ರೆ ನೇತೃತ್ವದಲ್ಲಿ ತಪಾಸಣೆ ನಡೆಸಲಾಗುತ್ತದೆ. ಪ್ರತಿ ಸ್ಕ್ಯಾನಿಂಗ್ ಕೇಂದ್ರವು ಅಗತ್ಯ ದಾಖಲಾತಿಗಳನ್ನು ಇಡಬೇಕಾಗುತ್ತದೆ. ಒಟ್ಟು 72 ಕೇಂದ್ರಗಳಲ್ಲಿ ಗರ್ಭ ತಪಾಸಣೆ ನಡೆಸಲಾಗುತ್ತಿದೆ.
ಗರ್ಭಕ್ಕೆ ಯಾವುದಾದರೂ ಲೋಪದೋಷ ಇರುವ ಬಗ್ಗೆ ತಪಾಸಣೆಗೆ ಒಳಪಡುವ ಮಹಿಳೆಯ ಎಲ್ಲ ವಿವರದ ರಜಿಸ್ಟರ್, ನಾಲ್ಕು ಕಾಲಂ ರಜಿಸ್ಟರ್, ಬಿಲ್ ಬುಕ್ ಕಡ್ಡಾಯವಾಗಿ ಇಡಬೇಕಾಗುತ್ತದೆ. ಕೆಲವೆಡೆ ಸಣ್ಣ ಪಟ್ಟ ಲೋಪದೋಷ ಕಂಡುಬಂದವರಿಗೆ ನೋಟೀಸ್ ಈಗಾಗಲೇ ನೀಡಲಾಗಿದೆಯೆಂದು ಸಭೆಗೆ ತಿಳಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ ಅನೇಕ ಲಂಬಾಣಿ ತಾಂಡಾಗಳಿದ್ದು, ಬಗದಲ್ ಹೊನ್ನಿಕೇರಿ ಅಂತಹ ತಾಂಡಾಗಳಲ್ಲಿ ಗಂಡು, ಹೆಣ್ಣು ಅನುಪಾತ ತೀರ ಕಡಿಮೆ ಇದೆ, ಹೆಣ್ಣು ಅನುಪಾತ ತೀರ ಕುಸಿತದ ಬಗ್ಗೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸಬೇಕೆಂದು ಜಿಲ್ಲಾ ತಪಾಸಣಾ ಹಾಗೂ ಪರಿಶೀಲನಾ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರಾದ ವಕೀಲರಾದ ಉಮೇಶ ಪಾಂಡ್ರೆ ಸಭೆಯ ಗಮನಕ್ಕೆ ತಂದರು.
ಆಶಾ ಕಾರ್ಯಕರ್ತೆಯರು ಪ್ರತಿ ಗರಾಮದಲ್ಲಿ ಗರ್ಭಿಣಿ ಮಹಿಳೆಯರ ಬಗ್ಗೆ ನಿಗಾ ವಹಿಸಬೇಕು. ಭ್ರೂಣ ಹತ್ಯೆ ಲಿಂಗ ತಪಾಸಣೆ ನಿಷೇಧ ಬಗ್ಗೆ ಗರ್ಭಿಣಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕಾ ಮಟ್ಟದಲ್ಲಿ ಸಭೆ ನಡೆಸುವಂತೆ ಡಿಎಚ್ಓ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಉತ್ತಮ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಬಗ್ಗೆ ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನಿಂದ ಚೈತನ್ಯಶ್ರೀ ಪ್ರಶಸ್ತಿ ಪಡೆದ ಡಿ.ಎನ್.ಡಿ.ಟಿ. ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿರುವ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಆರತಿ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಮಕ್ಕಳ ತಜ್ಞ ಡಾ.ಸೋಹೆಲ್, ರೆಡಿಯೋಲಾಜಿಸ್ಟ್, ಡಾ.ಅಮಿತ ಶಾಹ, ಮಲಿಕಾರ್ಜುನ, ಮಂಜುಳಾ ಮಾಳೆ, ವಿನಯಕುಮಾರ ಮಾಳಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…