15/06/2025 11:04 AM

Translate Language

Home » ಲೈವ್ ನ್ಯೂಸ್ » ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಕೃಷಿ ಹೊಂಡ ನಿರ್ಮಿಸಿ-ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಾದ್ಯಂತ ಹೆಚ್ಚು ಹೆಚ್ಚು ಕೃಷಿ ಹೊಂಡ ನಿರ್ಮಿಸಿ-ಸಚಿವ ಈಶ್ವರ ಖಂಡ್ರೆ

Facebook
X
WhatsApp
Telegram

ಬೀದರ.25.ಮಾರ್ಚ.25: ರೈತರಿಗೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾವಿರಾರು ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಬಡ, ಮಧ್ಯಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೃಷಿಕರಿಗೆ ಅನುಕುಲವಾಗುವ ನಿಟ್ಟಿನಲ್ಲಿ ಸರಕಾರದ ಅನುದಾನವನ್ನು ಬಳಸಿ ಜಿಲ್ಲೆಯಾದ್ಯಂತ ಪ್ರತಿವರ್ಷ ಒಂದು ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ ಅವರಿಗೆ ತಿಳಿಸಿದರು.

ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು, ಜಲಾನಯನ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಿಯಶೀಲರಾಗಿ ರೈತರಲ್ಲಿ ಜಾಗೃತಿ ಮೂಡಿಸಿ ರೈತರ ಜಮೀನಿನಲ್ಲಿ ಹೆಚ್ಚಿನ ಕೃಷಿ ಹೊಂಡಗಳನ್ನು ನಿರ್ಮಿಸಬೇಕೆಂದು ಸಚಿವರು ತಿಳಿಸಿದರು. ಮಳೆ ಕಡಿಮೆಯಾಗಿ ನೀರಿನ ಅಭಾವವಾದಲ್ಲಿ ನೀರು ಸಂಗ್ರಹಣೆಗೆ ರೈತರಿಗೆ ಅನುಕೂಲವಾಗುತ್ತದೆಂದರು. ಈ ವರ್ಷ 334 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ತೊಗರಿ ಬೆಳೆ ಹಾನಿ: ಪಕ್ಕದ ಕಲ್ಬುರ್ಗಿ ಜಿಲ್ಲೆಯಲ್ಲಿ ನೆಟ್ಟೆ ರೋಗದಿಂದ ತೊಗರಿ ಬೆಳೆಗೆ ಸಾಕಷ್ಟು ಹಾನಿಯಾಗಿದ್ದು, ಬೀದರ ಜಿಲ್ಲೆಯಲ್ಲಿ ಒಣ ಬೇರು ರೋಗದಿಂದಾಗಿರುವ ಹಾನಿ (ಆಡಿಥಿ ಡಿooಣ ಡಿoಣ) ಬಗ್ಗೆ ತಕ್ಷಣವೇ ವರದಿ ಸಲ್ಲಿಸುವಂತೆ ಕೃಷಿ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

70 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಭವಿಸುವ ಹಿನ್ನಲೆಯಲ್ಲಿ: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಿಯಾದರೂ ಸಮಸ್ಯೆ ಕಂಡು ಬಂದಲ್ಲಿ 24 ಗಂಟೆಗಳಲ್ಲಿ ಬಗೆಹರಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಔರಾದ್ ತಾಲ್ಲೂಕಿನ ರಕ್ಷಾಳ ಹಾಗೂ ಕರ್ಕಿಹಾಳ ಗ್ರಾಮ, ಭಾಲ್ಕಿ ತಾಲ್ಲೂಕಿನ ಜೈನಾಪುರ ಹಾಗೂ ಧಾರಜವಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಬಗ್ಗೆ ಗ್ರಾಮಸ್ಥರು ತಮಗೆ ಅಹವಾಲು ನೀಡಿದ ತಕ್ಷಣವೇ ಬಗೆಹರಿಸುವಂತೆ ಸಚಿವರು ತಿಳಿಸಿದರು.

ಸಧ್ಯ 70 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಭವಿಸುವ ಮುನ್ನೆಚ್ಚರಿಕೆಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಮಲನಗರದ ಐದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದೆಡೆ ಕೊಳವೆ ಬಾವಿಗಳನ್ನು ಸಹ ಬಳಸಲಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಪತ್ರಿಕೆಗಳ ವರದಿಗೆ ಸ್ಪಂದಿಸಿ: ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಸಮಸ್ಯೆಯಾತ್ಮಕ ವರದಿಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸಮಸ್ಯೆಯನ್ನು ಪರಿಶೀಲಿಸಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಆರಂಭವಾಗಿದ್ದು, ಈ ಬಾರಿ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಲ್ಲಿ ಅದಿಕಾರಿಗಳು ಇದ್ದಾರೆ. ಶೇ. 70 ರಷ್ಟು ಬರಲಿದೆಯೆಂದು ಸಚಿವರು ಆಶಿಸಿದರು.

ಕೆ.ಕೆ.ಆರ್.ಡಿ.ಬಿಯ ಮೈಕ್ರೋ ಹಾಗೂ ಮ್ಯಾಕ್ರೊ ಅನುದಾನದ ಕಾಮಗಾರಿಗಳಲ್ಲಿ ಗುಣಮಟ್ಟದ ಕಾಪಾಡುವಂತೆ ಸಚಿವರು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎA.ವಾನತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!