09/06/2025 7:57 PM

Translate Language

Home » ಲೈವ್ ನ್ಯೂಸ್ » ಜಿಲ್ಲೆಯಾದ್ಯಾಂತ 52,812 ಪ್ರಕರಣಗಳಿಂದ 28.03
ಕೋಟಿ ರೂ. ಇತ್ಯರ್ಥ-ನ್ಯಾ.ಪ್ರಕಾಶ ಬನಸೋಡೆ

ಜಿಲ್ಲೆಯಾದ್ಯಾಂತ 52,812 ಪ್ರಕರಣಗಳಿಂದ 28.03
ಕೋಟಿ ರೂ. ಇತ್ಯರ್ಥ-ನ್ಯಾ.ಪ್ರಕಾಶ ಬನಸೋಡೆ

Facebook
X
WhatsApp
Telegram

ಬೀದರ.11.ಮಾರ್ಚ.25: – ಬೀದರ ಜಿಲ್ಲೆಯಲ್ಲಿ ಮಾರ್ಚ.8 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲೆಯಾದ್ಯಾಂತ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿ 28,03,91,766 ರೂ. ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು.


ಅವರು ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಜಿಲ್ಲೆಯಾದ್ಯಂತ 10,044 (ಪೆಂಡಿAಗನಲ್ಲಿನ) ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು 12,83,46,917 ರೂ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಾಂತ ಒಟ್ಟು 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು 15,20,44,849 ರೂ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.
ಈ ಬಾರಿಯ ಲೋಕ ಆದಾಲತನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂದಾನದ ಮೂಲಕ 07 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ ಹಾಗೂ ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 8 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆಂದರು.


ಲೋಕ ಆದಲಾತನಲ್ಲಿ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಹಕರಿಸಿದ ಎಲ್ಲಾ ಇಲಾಖೆಯವರಿಗೂ ಹಾಗೂ ಜಿಲ್ಲೆಯಾದ್ಯಾಂತ ಹೆಚ್ಚಿನ ಪ್ರಚಾರ ಕೈಗೊಂಡ ಪತ್ರಿಕಾ ಮಾದ್ಯಮದವರಿಗೂ ಪ್ರಾಧಿಕಾರದ ಮುಲಕ ಅಭಿನಂದನೆಗಳನ್ನು ಸಲ್ಲಿಸಿದರು.


ಈ ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ, ನಾಗರಾಜ, ಪ್ರೀತಿ, ಜೀವನ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಾರ್ಚ್‌ 8ರಂದು ಏರ್ಪಡಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಕಕ್ಷಿದಾರರಿಗೆ ₹28.03 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!