ಜಿಲ್ಲೆಯ ಹಣಕಾಸು ಲೇವಾದೇವಿಗಾರರುತಮ್ಮ ಸಂಸ್ಥೆಯ ಲೈಸೆನ್ಸ್ ನವೀಕರಣ!


ಬೀದರ, 05ಡಿಸೆಂಬರ್24:- ಕರ್ನಾಟಕ ರಾಜ್ಯ ಲೇವಾದೇವಿಗಾರರು, ಗಿರವಿ ಕಾಯ್ದೆ 1961 ರ ಅಡಿ ಪರವಾನಿಗೆ ಪಡೆದು ಕಾರ್ಯನಿರ್ವಾಹಿಸುತ್ತಿರುವ ಬೀದರ ಜಿಲ್ಲೆಯ ಲೇವಾದೇವಿ, ಗಿರಿವಿ ಹಾಗೂ ಹಣಕಾಸು ಸಂಸ್ಥೆಗಳ ಪರವಾನಿಗೆ ಅವಧಿಯು 31 ನೇ ಮಾರ್ಚ್ 2025 ರಂದು ಮುಕ್ತಾಯವಾಗುತ್ತಿರುವುದರಿಂದ ತಮ್ಮ ಸಂಸ್ಥೆಯ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ 31 ಜನೆವರಿ 2025 ರೊಳಗಾಗಿ ನಿಗಧಿತ ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಳ್ಳಬೇಕು.

ನಂತರ ಬಂದ ನವೀಕರಣ ಅರ್ಜಿಗಳಿಗೆ ಕಾಯ್ದೆ ಕಲಂ 6 (4) ರಲ್ಲಿ ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು (ಎರಡರಷ್ಟು) ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಬೀದರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಜಿಲ್ಲೆಯ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳ ಪರವಾನಿಗೆ ನವೀಕರಣಗೋಳಿಸದೆ ವ್ಯವಹಾರ ತೊಡಗಿಸಿಕೊಂಡಲ್ಲಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ನವೀಕರಣ ಗೊಳಿಸದೆ ಇರುವ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳ ಭದ್ರತಾ ಠೇವಣಿಯನ್ನು ಮುಟ್ಟಗೋಲೂ ಮಾಡಲಾಗುವುದು ಹಾಗೂ ಕರ್ನಾಟಕ ರಾಜ್ಯ ಲೇವಾದೇವಿಗಾರರು, ಗಿರವಿ ಕಾಯ್ದೆ 1961 ರ ಕಾಯ್ದೆ ಕಲಂ 7ಎ (2) ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿದ ಮೊತ್ತಕ್ಕೆ ಅನುಗುಣಾವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಬೀದರ ಈ ಕಛೇರಿಯ ಮುಖಾಂತರ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago