ಬೀದರ, 05ಡಿಸೆಂಬರ್24:- ಕರ್ನಾಟಕ ರಾಜ್ಯ ಲೇವಾದೇವಿಗಾರರು, ಗಿರವಿ ಕಾಯ್ದೆ 1961 ರ ಅಡಿ ಪರವಾನಿಗೆ ಪಡೆದು ಕಾರ್ಯನಿರ್ವಾಹಿಸುತ್ತಿರುವ ಬೀದರ ಜಿಲ್ಲೆಯ ಲೇವಾದೇವಿ, ಗಿರಿವಿ ಹಾಗೂ ಹಣಕಾಸು ಸಂಸ್ಥೆಗಳ ಪರವಾನಿಗೆ ಅವಧಿಯು 31 ನೇ ಮಾರ್ಚ್ 2025 ರಂದು ಮುಕ್ತಾಯವಾಗುತ್ತಿರುವುದರಿಂದ ತಮ್ಮ ಸಂಸ್ಥೆಯ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ 31 ಜನೆವರಿ 2025 ರೊಳಗಾಗಿ ನಿಗಧಿತ ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಳ್ಳಬೇಕು.
ನಂತರ ಬಂದ ನವೀಕರಣ ಅರ್ಜಿಗಳಿಗೆ ಕಾಯ್ದೆ ಕಲಂ 6 (4) ರಲ್ಲಿ ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು (ಎರಡರಷ್ಟು) ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಬೀದರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಜಿಲ್ಲೆಯ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳ ಪರವಾನಿಗೆ ನವೀಕರಣಗೋಳಿಸದೆ ವ್ಯವಹಾರ ತೊಡಗಿಸಿಕೊಂಡಲ್ಲಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ನವೀಕರಣ ಗೊಳಿಸದೆ ಇರುವ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳ ಭದ್ರತಾ ಠೇವಣಿಯನ್ನು ಮುಟ್ಟಗೋಲೂ ಮಾಡಲಾಗುವುದು ಹಾಗೂ ಕರ್ನಾಟಕ ರಾಜ್ಯ ಲೇವಾದೇವಿಗಾರರು, ಗಿರವಿ ಕಾಯ್ದೆ 1961 ರ ಕಾಯ್ದೆ ಕಲಂ 7ಎ (2) ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿದ ಮೊತ್ತಕ್ಕೆ ಅನುಗುಣಾವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಬೀದರ ಈ ಕಛೇರಿಯ ಮುಖಾಂತರ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…
ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…