ಚಾಮರಾಜನಗರ.26.ಫೆ.25:- ಹನೂರು ಪಟ್ಟಣದ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿ ಪರ ಕೋರ್ಸ್ ಗಳಾದ ಸಿಇಟಿ, ನೀಟ್, ಜೆಇಇ ,ಮುಂತಾದ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳನ್ನು ಮಂಗಳವಾರ ವಿತರಿಸಿದರು.
ಗಣಿತ ಉಪನ್ಯಾಸಕ ನಂಜುಂಡಯ್ಯ ರವರು ಮಾತನಾಡಿ ಕರ್ನಾಟಕ ಸರಕಾರ ರಾಜ್ಯಾದ್ಯಂತ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನೀಡಿ ಅದರಲ್ಲಿ ವೃತ್ತಿ ಪರ ಕೋರ್ಸ್ ಗಳಲ್ಲಿ ಹೇಗೆ ಉತ್ತೀರ್ಣರಾಗಬೇಕೆಂದು ಆನ್ ಲೈನ್ ನಲ್ಲಿ ಕೋಚಿಂಗ್ ನೀಡಲಾಗಿತ್ತು ಇದಕ್ಕೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ.
ಇದಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಸರಕಾರವೇ ಉಚಿತವಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಡಿದೆ.
ಅದರಿಂದ ನಾವು ನಮ್ಮ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಗಿದೆ.
ಸರಕಾರಿ ಕಾಲೇಜಿನಲ್ಲಿ ಓದುತ್ತಿರುವ ಮಕ್ಕಳಿಗೆ ಮಾತ್ರ ಇಂತಹ ಅವಕಾಶಗಳು ಸಿಗುತ್ತದೆ. ಏಕೆಂದರೆ? ಇಲ್ಲಿ ಕಡು ಬಡವರ ಮಕ್ಕಳು ಅಧ್ಯಾಯನಮಾಡುತ್ತಿದ್ದಾರೆ ಇವರು ಕೂಡ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗಿಂತ ಮುಂದೆ ಬರಲಿ ಹಾಗೂ ಉತ್ತಮ ಫಲಿತಾಂಶಗಳು ಬರಲಿ ಎಂದು ಇಂತಹ ಯೋಜನೆಯನ್ನು ಸರಕಾರ ಮಾಡಿದೆ.
ಸರಕಾರಿ ಕಾಲೇಜಿನಲ್ಲಿ ಅನೇಕ ಸವಲತ್ತುಗಳಿವೆ ಗ್ರಾಮೀಣ ಪ್ರದೇಶದವರು ಮತ್ತು ನಗರವಾಸಿಗಳು ನಿಮ್ಮ ನಿಮ್ಮ ಮಕ್ಕಳನ್ನು ಸರಕಾರಿ ಕಾಲೇಜಿಗೆ ಸೇರಿಸಬೇಕಾಗಿದೆ.
ಸರಕಾರವು ಅನೇಕ ಕೋಟಿ ರೂಪಾಯಿ ಖರ್ಚು ಮಾಡಿ ಗುಣಮಟ್ಟ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿ ಪರ ಕೋರ್ಸ್ ಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಹೇಗೆ ತಯಾರಾಬೇಕು ಎಂಬುವುದನ್ನು ಪುಸ್ತಕಗಳ ಮೂಲಕ ಹೊರತರಲಾಗಿದೆ. ಸರಕಾರಿ ಕಾಲೇಜಿನಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳನ್ನು ಉತ್ತೇಜಿಸುತ್ತದೆ.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಫರ್ಹಾನ ಬೇಗಂ, ಕುಸುಮ, ಸವಿತ, ಹರೀಶ್, ಸಿಬ್ಬಂದಿಗಳಾದ ಪ್ರಭು, ನಾಗರಾಜು, ಕೃಷ್ಣಮೂರ್ತಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು
_G Prasannakumar Kittur
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…