ಜೀವನ್ ಧಾರ ಯೋಜನೆ’ ಪ್ರಾರಂಭಿಸಲು ಸಹಿ ಹಾಕಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

ಬೀದರ.31.ಜನೆವರಿ.25.ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯು ಇದೀಗ ಬೀದರ್ ನ ಔರಾದ್ ತಾಲೂಕಿನ ರೈತರಿಗೆ ನೆರವಾಗಲು ಜೀವನ್ ಧಾರಾ ಯೋಜನೆಯನ್ನು ಆರಂಭಿಸಲು ವಾಟರ್ ಶೆಡ್ ಆರ್ಗನೈಸೇಷನ್ ಟ್ರಸ್ಟ್ (ಡಬ್ಲ್ಯೂಓಟಿಆರ್) ಜೊತೆಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ.


ಬೀದರ್ ಜಿಲ್ಲೆಯ ಬರಪೀಡಿತ ಔರಾದ್ ತಾಲೂಕನ್ನು ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿರುವ ಟಿಕೆಎಂನ ಮಹತ್ವದ ಯೋಜನೆ ಇದಾಗಿದ್ದು, ಸಾಮಾಜಿಕ-ಆರ್ಥಿಕ ಮತ್ತು ಪರಿಸರ ಸವಾಲುಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.


ಔರಾದ್ ತಾಲೂಕಿನಲ್ಲಿ ನಡೆದ ಔಪಚಾರಿಕ ಸಮಾರಂಭದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಮುಖ್ಯ ಸಂವಹನ ಅಧಿಕಾರಿ, ಹಿರಿಯ ಉಪಾಧ್ಯಕ್ಷ ಮತ್ತು ರಾಜ್ಯ ವ್ಯವಹಾರಗಳ ಮುಖ್ಯಸ್ಥ ಸುದೀಪ್ ದಳವಿ ಮತ್ತು ಟಿಕೆಎಂ ಆಡಳಿತ ಮಂಡಳಿಯ ಪ್ರತಿನಿಧಿ ಜನರಲ್ ಮ್ಯಾನೇಜರ್ ರೋಶನ್ ಅವರು ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದರು.


9 ಗ್ರಾಮಗಳು ಮತ್ತು 5,322.34 ಹೆಕ್ಟೇರ್ ಪ್ರದೇಶಗಳಿಗೆ ವ್ಯಾಪಿಸಿರುವ ಈ ಯೋಜನೆಯು 2,063 ಕುಟುಂಬಗಳ 11,026 ಸಮುದಾಯದ ಸದಸ್ಯರಿಗೆ ನೇರ ಪ್ರಯೋಜನ ಒದಗಿಸಲಿದ್ದು, ಈ ಪ್ರದೇಶದಲ್ಲಿನ ಸಾಮಾಜಿಕ-ಆರ್ಥಿಕ ಮತ್ತು ಪರಿಸರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ.


ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಹಿರಿಯ ಉಪಾಧ್ಯಕ್ಷ ಮತ್ತು ರಾಜ್ಯ ವ್ಯವಹಾರಗಳ ಮುಖ್ಯಸ್ಥ ಸುದೀಪ್ ದಳವಿ ಮಾತನಾಡಿ, ‘ಸುಸ್ಥಿರ ಸಮಾಜಗಳ ನಿರ್ಮಾಣ’ ಎಂಬ ನಮ್ಮ ಜಾಗತಿಕ ಫಿಲಾಸಫಿಗೆ ಅನುಗುಣವಾಗಿ ಸಮಾಜದಲ್ಲಿ ಸುಸ್ಥಿರ ಬದಲಾವಣೆಯನ್ನು ತರಲು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬದ್ಧವಾಗಿದೆ.

ಎಲ್ಲರಿಗೂ ಉತ್ತಮವಾದ ಮತ್ತು ಒಳಗೊಳ್ಳುವಿಕೆಯ ಸಮಾಜ ನಿರ್ಮಾಣ ಮಾಡುವ ಈ ಪ್ರಯಾಣದ ಭಾಗವಾಗಿರಲು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಹೆಮ್ಮೆ ಪಡುತ್ತದೆ ಎಂದು ಹೇಳಿದರು.


ಜೀವನ್ ಧಾರಾ ಯೋಜನೆಯು ಈ ಪ್ರದೇಶದ ಪರಿಸರ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ, ಕೃಷಿ ಕ್ಷೇತ್ರ ಸುಧಾರಿಸುವ ಮತ್ತು ಸ್ಥಳೀಯ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago