ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಕೆ. ಪಾಟೀಲ್ ಅವರು ಜೂನ್. 16 ಮತ್ತು 17. ರಂದು  ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜೂನ್. 16 ರಂದು ಬೆಳಿಗ್ಗೆ 9 ಗಂಟೆಗೆ ಗದಗ ರಸ್ತೆ ಮೂಲಕ ಸಚಿವರು ಗಂಗಾವತಿ ತಾಲೂಕಿನ ಅಂಜನಾದ್ರಿಗೆ ಆಗಮಿಸಿ. ಬೆಳಿಗ್ಗೆ 10:30 ರಿಂದ 12 ಗಂಟೆಗಳವರೆಗೆ ಅಂಜನಾದ್ರಿ ಬೆಟ್ಟದ ಮೇಲಿನ ಆಂಜನೇಯ ದೇವಸ್ಥಾನ ವೀಕ್ಷಣೆ ಮಾಡುವರು.


ಮಧ್ಯಾಹ್ನ 12 ಗಂಟೆಯಿಂದ 12:30 ರವರೆಗೆ ಅಂಜನಾದ್ರಿ ಅಭಿವೃದ್ಧಿ ಕುರಿತು ಪಿಪಿಟಿ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡುವರು. ಮಧ್ಯಾಹ್ನ 12:30 ರಿಂದ 1 ಗಂಟೆಯವರೆಗೆ ಅಂಜನಾದ್ರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 1:30 ಕ್ಕೆ ಅಂಜನಾದ್ರಿಯಿಂದ ರಸ್ತೆ ಮೂಲಕ ಹುಚ್ಚಪ್ಪಯ್ಯನ ಮಠಕ್ಕೆ ಪ್ರಯಾಣಿಸುವರು.

ಮಧ್ಯಾಹ್ನ 1:30 ರಿಂದ 2 ಗಂಟೆಗಳವರೆಗೆ ಗಂಗಾವತಿ ತಾಲ್ಲೂಕಿನ ಹುಚ್ಚಪ್ಪಯ್ಯನ ಮಠ ಮತ್ತು ಅಂಬಿಗರ ಬಾಗಿಲು ವೀಕ್ಷಣೆ ಮಾಡುವರು. ಮಧ್ಯಾಹ್ನ 2:30 ಕ್ಕೆ ಹುಚ್ಚಪ್ಪಯ್ಯನ ಮಠದಿಂದ ರಸ್ತೆ ಮೂಲಕ ಚಿಂತಾಮಣಿ ಮಠಕ್ಕೆ ಪ್ರಯಾಣಿಸಿ ಮಧ್ಯಾಹ್ನ 3 ರಿಂದ 3:30 ರವರೆಗೆ ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿರುವ ಚಿಂತಾಮಣಿ ಮಠ ( ನರಸಿಂಹ ದೇವಾಲಯ) ವೀಕ್ಷಣೆ ‌ಮಾಡುವರು. ಮಧ್ಯಾಹ್ನ 3:30 ರಿಂದ 4:30 ರವರೆಗೆ ಕಾಯ್ದಿರಿಸಿದೆ.ಸಂಜೆ 4:30 ಕ್ಕೆ  ಚಿಂತಾಮಣಿ ಮಠದಿಂದ ರಸ್ತೆ ಮೂಲಕ ಗಗನ್ ಮಹಲ್‌ ಪ್ರಯಾಣ ಬೆಳೆಸಿ ಸಂಜೆ 4:40 ರಿಂದ 4:50 ರವರೆಗೆ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿರುವ ಗಗನ್ ಮಹಲ್ ವೀಕ್ಷಣೆ ಮಾಡುವರು. ಸಂಜೆ 4:50 ಕ್ಕೆ ಗಗನ್ ಮಹಲನಿಂದ ರಸ್ತೆ ಮೂಲಕ ಬಹದ್ದೂರ್ ಬಂಡೆ ಕೋಟೆಗೆ ಪ್ರಯಾಣಿಸುವರು. ಸಂಜೆ 5 ರಿಂದ 5:30 ರವರೆಗೆ ಕೊಪ್ಪಳ ತಾಲ್ಲೂಕಿನ ಬಹದ್ದೂರ್ ಬಂಡೆ ಕೋಟೆ ವೀಕ್ಷಣೆ ಮಾಡುವರು. ಸಂಜೆ 5:30 ಕ್ಕೆ ಬಹದ್ದೂರ್ ಬಂಡೆ ಕೋಟೆಯಿಂದ ರಸ್ತೆ ಮೂಲಕ ಕೊಪ್ಪಳಕ್ಕೆ ಪ್ರಯಾಣ ಬೆಳೆಸುವರು. ಸಂಜೆ 6 ಗಂಟೆಗೆ ಕೊಪ್ಪಳ. ಸಂಜೆ 7:‌ 30 ಕ್ಕೆ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಭೇಟಿ ಮಾಡುವರು. ರಾತ್ರಿ 8 ಗಂಟೆಗೆ ಶ್ರೀ ಗವಿಸಿದ್ದೇಶ್ವರ ಮಠದಿಂದ ಹೊಸಪೇಟೆಗೆ ಪ್ರಯಾಣ ಬೆಳೆಸಿ ವೈಕುಂಠ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವರು.


ಜೂನ್. 17 ರಂದು ಬೆಳಿಗ್ಗೆ 10 ಗಂಟೆಗೆ ‌ಕೊಪ್ಪಳ ರಸ್ತೆ ಮೂಲಕ ಗಂಗಾವತಿ ತಾಲ್ಲೂಕಿನ ಹಿರೆಬೆಣಕಲಗೆ ಆಗಮಿಸಿ ಬೆಳಿಗ್ಗೆ 11 ರಿಂದ 12 ಗಂಟೆಗಳವರೆಗೆ ಹಿರೇಬೆಣಕಲ್‌ ಪ್ರಾಗೈತಿಹಾಸಿಕ ನೆಲೆಗಳ ವೀಕ್ಷಣೆ ಮಾಡುವರು ನಂತರ ಮಧ್ಯಾಹ್ನ 12:30 ರಿಂದ 1 ಗಂಟೆಗಳವರೆಗೆ ಹಿರೆಬೆಣಕಲನಲ್ಲಿ ಪತ್ರಿಕಾಗೋಷ್ಠಿ ನಡೆಸುವರು.

ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಗಳವರೆಗೆ ಕಾಯ್ದಿರಿಸಿದೆ. ಸಂಜೆ 4 ಗಂಟೆಗೆ ಗಂಗಾವತಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ಪ್ರಯಾಣ ‌ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…

28 minutes ago

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

8 hours ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

8 hours ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

12 hours ago

ಹಾಕಿ ಪ್ರೊ ಲೀಗ್: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ 1-2 ಅಂತರದ ಸೋಲು

ನೆದರ್ಲ್ಯಾಂಡ್ಸ್‌ನ ಆಮ್ಸ್ಟೆಲ್ವೀನ್‌ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ…

12 hours ago

WTC ಫೈನಲ್: ಆಸ್ಟ್ರೇಲಿಯಾ 2ನೇ ದಿನದ ಅಂತ್ಯಕ್ಕೆ 144/8, ದಕ್ಷಿಣ ಆಫ್ರಿಕಾಕ್ಕಿಂತ 218 ರನ್‌ಗಳ ಮುನ್ನಡೆ

ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನ 2ನೇ ದಿನದ ಅಂತ್ಯಕ್ಕೆ…

12 hours ago