ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ ಯೋಗ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂನ್. 21 ರಂದು ಹನ್ನೊಂದನೇಯ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಬೀದರ ಕೋಟೆಯಲ್ಲಿ ಧ್ಯೇಯವಾಕ್ಯ: ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ “ಯೋಗ ಸಂಗಮ” ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ಎಪಿ: 25 ಸಾವಿರ ಬುಡಕಟ್ಟು ಮಕ್ಕಳು 108 ನಿಮಿಷಗಳಲ್ಲಿ 108 ಸೂರ್ಯ ನಮಸ್ಕಾರ ಮಾಡಿದ್ದಾರೆ.

ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…

5 hours ago

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…

5 hours ago

ನಕಲಿ ವೈದರಿಗೆ ದಂಡ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…

5 hours ago

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.21.ಜೂನ್.25:- ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಗುರುವಾರ…

5 hours ago

ಅನುಭವ ಮಂಟಪ 742 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ

ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ.…

5 hours ago

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ20.ಜೂನ್.25:- 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ…

5 hours ago