ಕೊಪ್ಪಳ.12.ಜೂನ್.25: – ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕುಗಳ 2025-26ನೇ ಸಾಲಿನ ತಾಲೂಕಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯನ್ನು ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತಿಯ ಮಂಥನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸಿಕೊಳ್ಳುವರು. ಆದ್ದರಿಂದ ತಾಲೂಕಾ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಏಪ್ರಿಲ್-2025 ರಿಂದ ಮೇ-2025 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಗಂಗಾವತಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.