ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವಾಸಿ ಮಂದಿರ ಔರಾದ(ಬಾ) ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 5 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಠಾಣೆ ಕೆಎಚ್ಬಿ ಕಾಲೋನಿ, ಎಂಐಜಿ 29, ಬಾಲಭವನ ಎದುರುಗಡೆ ಬೀದರದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬAಧಿಸಿದ ದೂರುಗಳಿದ್ದರಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ. 1 ಮತ್ತು 2 ತೆಗೆದುಕೊಂಡು ದೂರುನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಬೀದರ ಅವರ ಮೊಬೈಲ್ ಸಂಖ್ಯೆ: 9364062571 ಪೊಲೀಸ್ ನಿರೀಕ್ಷಕರು-4 ಕರ್ನಾಟಕ ಲೋಕಾಯುಕ್ತ ಬೀದರ ಅವರ ಮೊಬೈಲ್ ಸಂಖ್ಯೆ: 9364062675 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.