ಕೊಪ್ಪಳ.20.ಜೂನ್.25:-ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಗ್ಗೆ 7 ಗಂಟೆಗೆ ರಾಯಚೂರಿನಿಂದ ರಸ್ತೆಯ ಮೂಲಕ ಹೊರಟು, 11 ಗಂಟೆಗೆ ಕೊಪ್ಪಳ ಜಿಲ್ಲೆಯ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸುವರು. ಅಲ್ಲಿಂದ 11.15ಕ್ಕೆ ನಿರ್ಗಮಿಸಿ, ನಂತರ 11.30ಕ್ಕೆ ಶಿರೂರ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖಾಂತರ ನಿರ್ಮಿಸಲಾಗಿರುವ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.45ಕ್ಕೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಬಳಿಕ ಅಂದು ಮಧ್ಯಾಹ್ನ 3 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.21.ಜೂನ್.25:- ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು…
ಬೀದರ.21.ಜೂನ್.25:- ಗುರುನಾನಕ್ ಪ್ರಥಮ ದರ್ಜೆ ಕಾಲೇಜು ಬೀದರ್ ನ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಅಂತರ ಕಾಲೇಜು ವಿವಿಧ ಕ್ರೀಡಾ…
ಔರಾದ.21.ಜೂನ್.25:- ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ:…
ಬೆಂಗಳೂರು.21.ಜೂನ್.25:- ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…
ತಾತ್ಕಾಲಿಕ ಉದ್ಯೋಗಿ ಎಂದರೆ ಶಾಶ್ವತ ಹುದ್ದೆಗೆ ಬದಲಾಗಿ ನಿರ್ದಿಷ್ಟ, ಸಾಮಾನ್ಯವಾಗಿ ಅಲ್ಪಾವಧಿಯ, ಉದ್ದೇಶ ಅಥವಾ ಯೋಜನೆಗಾಗಿ ನೇಮಕಗೊಂಡ ತಾತ್ಕಾಲಿಕ ಕೆಲಸಗಾರ.…
ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…