ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ., ವಿಜನ್ ಕರ್ನಾಟಕ ಫೌಂಡೇಶನ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ರವರ ಸಹಯೋಗದೊಂದಿಗೆ ಉದ್ಯಮ ಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಜೂನ್ 24ರಂದು ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗುತ್ತಿದೆ.
ಶಿಕ್ಷಣ ವಂಚಿತ ಯುವಕರು, ಐದಾರು ಜನ ಯುವಕರು ಸೇರಿ ಮಾಡಬಹುದಾದಂತಹ ಉದ್ಯಮಗಳು, ಸಂಘ-ಸಂಸ್ಥೆಗಳು ಅವರ ಸದಸ್ಯರಿಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಅವಕಾಶ, ಮಹಿಳೆಯರಿಗೆ ಸ್ವಯಂ ಉದ್ಯಮಗಳ ಮಾಹಿತಿ, ಸುಲಭವಾಗಿ ಬ್ಯಾಂಕ್ ಲೋನ್ ಪಡೆಯುವಲ್ಲಿ ವಿಕೆಫ್ ವತಿಯಿಂದ ಗ್ಯಾರಂಟಿ ಸಹಾಯ ಹಾಗೂ ಮಾರ್ಕೆಟಿಂಗ್ ಕುರಿತು ಮಾಹಿತಿ, ಉದ್ಯಮ ಸ್ಥಾಪನೆಗಾಗಿ ಲಭ್ಯವಿರುವ ಸಹಾಯಧನ ಸಬ್ಸಿಡಿ ಇನ್ನೀತರೆ ಆರ್ಥಿಕ ಸೌಲಭ್ಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳೊಂದಿಗೆ ನೇರವಾಗಿ ಮಾತನಾಡುವ ಅವಕಾಶ ಹಾಗೂ ಇನ್ನು ಹಲವು ಹೆಚ್ಚಿನ ಉದ್ಯಮ ಸಂಬಂಧಿತ ಪ್ರಶ್ನೆಗಳಿಗೆ ಸಂಶಯಗಳಿಗೆ ಉತ್ತರ ನೀಡಿ ತಮ್ಮ ಉದ್ಯಮವನ್ನು ಸ್ಥಾಪಿಸುವಲ್ಲಿ ನೆರವು ನೀಡುವ ಕಾರ್ಯಕ್ರಮವಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಸಂಘಗಳು, ಮಂಡಳಿಗಳು ಮತ್ತು ಸಂಸ್ಥೆಗಳ ಸರ್ವ ಸದಸ್ಯರು ಹಾಗೂ ಯುವ ಜನತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗಿದೆ.
ಉದ್ಯಮ ಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಒಂದು ದಿನದ ಕಾರ್ಯಾಗಾರವಾಗಿದ್ದು, ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಭಾಗವಹಿಸಿದವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9379549304, 8539230121 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.