ಕೊಪ್ಪಳ.22.ಜೂನ್.25:- ಮುನಿರಾಬಾದ ಉಪ ವಿಭಾಗದಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯದ ಪ್ರಯುಕ್ತ ಮುನಿರಾಬಾದ್ ವ್ಯಾಪ್ತಿಯ ಗ್ರಾಹಕರಿಗೆ ಜೂನ್ 23ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಅಂದು ಗಿಣಿಗೇರಾ & ಗಿಣಿಗೇರಾ ಬೈಪಾಸ್, ಹಿರೇ ಬಗನಾಳ, ಕಾಸನಕಂಡಿ, ಕುಣಿಕೇರಿ ಮತ್ತು ಕುಣಿಕೇರಿ ತಾಂಡಾ, ಕುಟುಗನಹಳ್ಳಿ, ಗಬ್ಬೂರು, ಹಾಲಹಳ್ಳಿ, ಭೀಮನೂರ, ಕಲ್ ತಾವರಗೇರಾ, ಎಫ್-3 ಬಗನಾಳ ಎನ್.ಜೆ.ವೈ ಫೀಡರ್, ಎಫ್-13 ಹಾಲಹಳ್ಳಿ ಎನ್.ಜೆ.ವೈ ಫೀಡರ್, ಎಫ್-7 ಎಸ್.ಆರ್.ಸಿ., ಇಂಡಸ್ಟ್ರಿಯಲ್ ಫೀಡರ್, ಎಫ್-10 ಗಾಳೆಮ್ಮ, ಎಫ್-12 ಗಿಣಿಗೇರಾ, ಎಫ್-11 ಕಲ್ ತವರಗೇರಾ ಎಫ್-9 ಎನ್.ಜೆ.ವೈ., 133 ಕೋಕಾ ಕೋಲಾ ಫೀಡರ್ ಸಂಬಂಧಪಟ್ಟ ಎಲ್ಲಾ ಗ್ರಾಹಕರಿಗೆ, ಎಫ್-1 ಕುಣಿಕೇರಿ ಐಪಿ, ಎಫ್-2 ಕರ್ಕಿಹಳ್ಳಿ ಐಪಿ, ಎಫ್-5 ಅಲ್ಲಾ ನಗರ ಐಪಿ, ಎಫ್-4 ಪೌಲ್ಟರಿ ಫಾರಂ ಮತ್ತು ಎಫ್-6 ಐಪಿ ಕಾಸನಕಂಡಿ, ಪಿ.ಬಿ.ಎಸ್ ಸೋಲಾರ್, ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
ನಿರ್ವಹಣಾ ಕಾರ್ಯದ ಪ್ರಯುಕ್ತ ವಿದ್ಯುತ್ ಮಾರ್ಗಮುಕ್ತತೆ (ಲೈನ್ ಕ್ಲೇರ್) ತೆಗೆದುಕೊಳ್ಳಲಾಗಿರುತ್ತದೆ. ಒಂದು ವೇಳೆ ನಿರ್ಣಯಿಸಿದ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡರೆ, ತಕ್ಷಣವೇ ಮಾರ್ಗಮುಕ್ತತೆಯನ್ನು ರಿಟರ್ನ್ ಮಾಡಿ ವಿದ್ಯುತ್ ಪೂರೈಕೆಯನ್ನು ಪುನಃ ಸ್ಥಾಪಿಸಲಾಗುವುದು.
ಆದ್ದರಿಂದ ಸಾರ್ವಜನಿಕರು, ಗ್ರಾಹಕರು ಯಾವುದೇ ಕಾರಣಕ್ಕೂ ಮಾರ್ಗಮುಕ್ತತೆ ತೆಗೆದುಕೊಂಡ ಅವಧಿಯಲ್ಲಿ ವಿದ್ಯುತ್ಗೆ ಸಂಬಂಧಿಸಿದ ಯಾವುದೇ ಕಾಮಗಾರಿಯನ್ನು ನಡೆಸಬಾರದೆಂದು ಈ ಮೂಲಕ ಕೋರಲಾಗಿದೆ.
ಈ ಕಾರಣದಿಂದಾಗಿ ಯಾವುದೇ ವಿದ್ಯುತ್ ಅವಘಡ ಸಂಭವಿಸಿದಲ್ಲಿ ಕಾಮಗಾರಿಯನ್ನು ನಡೆಸಿದರೆ, ಕಾಮಗಾರಿಯನ್ನು ನಡೆಸಿದ ಸಾರ್ವಜನಿಕರೇ ಅಥವಾ ಗ್ರಾಹಕರೇ ನೇರ ಹೊಣೆಗಾರರಾಗುತ್ತಾರೆ. ಇಂತಹ ವಿದ್ಯುತ್ ಅವಘಡಕ್ಕೆ ಜೆಸ್ಕಾಂ ಯಾವುದೇ ರೀತಿಯಲ್ಲಿ ಜವಾಬ್ದಾರವಲ್ಲ ಎಂದು ಈ ಮೂಲಕ ಸ್ಪಷ್ಟಪಡಿಲಾಗಿದೆ ಎಂದು ಮುನಿರಾಬಾದ್ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…