ಬೆಂಗಳೂರು.20.ಜೂನ್.25:- ಬೆಂಗಳೂರು ವಿಶ್ವವಿದ್ಯಾಲಯ ಬೆಂಗಳೂರು. ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಆವರಣದಲ್ಲಿ 200 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಒಳಗೊಂಡ ಥೀಮ್ ಪಾರ್ಕ್ ಹಾಗೂ ಸಂವಿಧಾನದ ಮ್ಯೂಸಿಯಂ ಶೀಘ್ರವೇ ತಲೆ ಎತ್ತಲಿದೆ.
ಅಂದಾಜು 200 ಕೋಟಿ ರೂ. ವೆಚ್ಚದಲ್ಲಿ 25 ಎಕರೆ ವಿಸ್ತೀರ್ಣದಲ್ಲಿ ಥೀಮ್ ಪಾರ್ಕ್ ಹಾಗೂ ಸಂವಿಧಾನದ ಮ್ಯೂಸಿಯಂ ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಗುರುವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಉದ್ದೇಶಿತ ಯೋಜನೆ ಕುರಿತು ಚರ್ಚಿಸಿದರು.
2019-20ನೇ ಸಾಲಿನ ಆಯವ್ಯಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಥೀಮ್ ಪಾರ್ಕ್ ಹಾಗೂ ಸಂವಿಧಾನದ ಮ್ಯೂಸಿಯಂ ಸ್ಥಾಪನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು.
“ಸಂವಿಧಾನ ರಚನೆಯ ಇತಿಹಾಸ, ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದೇಶದಿಂದ ಬೃಹತ್ ಮಟ್ಟದ ಸಂವಿಧಾನ ಮ್ಯೂಸಿಯಂ ಸ್ಥಾಪಿಸಲಾಗುವುದು ಎಂದು ಸರ್ಕಾರ ಹೇಳಿತ್ತು.
ಜ್ಞಾನಭಾರತಿ ಆವರಣದಲ್ಲಿ ಮ್ಯೂಸಿಯಂ
ಡಾ.ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್ ಹಾಗೂ ಸಂವಿಧಾನ ಮ್ಯೂಸಿಯಂ ಸ್ಥಾಪನೆಗೆ ಜ್ಞಾನಭಾರತಿ ಆವರಣವೇ ಸೂಕ್ತ ಎಂಬ ತಜ್ಞರ ಅಭಿಪ್ರಾಯ ಆಧರಿಸಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲು ಸರ್ಕಾರ ಮುಂದಾಗಿದೆ.
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಜ್ಞಾನಭಾರತಿ ಆವರಣ ಮುಖ್ಯದ್ವಾರದ ಬಳಿ ಇರುವ 25 ಎಕರೆ ಜಾಗವನ್ನು (ಬೆಂಗಳೂರು-ಮೈಸೂರು ರೈಲ್ವೆ ಟ್ರ್ಯಾಕ್ ನಿಂದ ಎನ್.ಎಸ್.ಎಸ್ ಕೇಂದ್ರದ ಮಧ್ಯ ಭಾಗದ ರಸ್ತೆಯ ಬಲ ಬದಿ) ಸಮಾಜ ಕಲ್ಯಾಣ ವಶಕ್ಕೆ ಪಡೆಯಲು ಸಿಎಂ ಸೂಚಿಸಿದ್ದಾರೆ.
ಜ್ಞಾನಭಾರತಿ ಅವರಣವೇ ಸೂಕ್ತ ಎಂಬ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶಾಲೆಯ ಅಭಿಪ್ರಾಯ ಆಧರಿಸಿ ಜಾಗ ಆಯ್ಕೆ ಮಾಡಲಾಗಿದೆ.
ಉನ್ನತ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಜಾಗವನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಥೀಮ್ ಪಾರ್ಕ್ ನಲ್ಲಿ ಏನೆಲ್ಲಾ ಇರಲಿದೆ?
ಥೀಮ್ ಪಾರ್ಕ್ನಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 200 ಅಡಿ ಎತ್ತರದ ಪ್ರತಿಮೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಬರಹ, ಸಾಧನೆ ಹಾಗೂ ಭಾರತ ಸಂವಿಧಾನ ರಚನೆಯ ಇತಿಹಾಸದ ಬಗ್ಗೆ ಮ್ಯೂಸಿಯಂ.
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಬೃಹತ್ ಗ್ರಂಥಾಲಯ.
ಬೌದ್ಧ ಸ್ತೂಪಗಳು ಮತ್ತು ವಿವಿಧ ಶಿಲ್ಪ ಕಲಾಕೃತಿಗಳು.
ಕಾನ್ಫರೆನ್ಸ್ ಹಾಲ್, ಮಿನಿ ಥಿಯೇಟರ್, ಉದ್ಯಾನವನ, ಸಂಗೀತ ಕಾರಂಜಿ ಇತ್ಯಾದಿ ಇರಲಿದೆ.
ಆಂಧ್ರದಲ್ಲಿರುವ ಪ್ರತಿಮೆ ಎತ್ತರವೆಷ್ಟು?
ಆಂಧ್ರಪ್ರದೇಶ ಸರ್ಕಾರ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಈ ಪ್ರತಿಮೆಯು 206 ಅಡಿ ಎತ್ತರವಿದ್ದು, ಅಮರಾವತಿಯ ಅಂಬೇಡ್ಕರ್ ಸ್ಮೃತಿ ವನದಲ್ಲಿ 81 ಅಡಿ ಎತ್ತರದ ಪೀಠದ ಮೇಲೆ ಸ್ಥಾಪಿಸಲಾಗಿದೆ.(ಇಲ್ಲಿ 125 ಅಡಿ ಅಂಬೇಡ್ಕರ್ ಪ್ರತಿಮೆ ಎತ್ತರ, 81 ಅಡಿ ಪೀಠದ ಎತ್ತರ ಸೇರಿ ಒಟ್ಟು 206 ಅಡಿ ಎಂದು ಪರಿಗಣಿಸಲಾಗಿದೆ)
ಪ್ರತಿಮೆ ಹಾಗೂ ಉದ್ಯಾನವನ್ನು 18.81 ಎಕರೆ ವಿಸ್ತೀರ್ಣದಲ್ಲಿ ಒಟ್ಟು 404.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಬೀದರ.20.ಜೂನ್.25:- ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳಿಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ…
ಬೀದರ.20.ಜೂನ್.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ…
ಬೀದರ.20.ಜೂನ್.25:- ರಕ್ತದಾನವೇ ಶ್ರೇಷ್ಠದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್.ವಿ.ಇ.ಟಿ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ…
ಬೀದರ.20.ಜೂನ್25:- ಬೀದರ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ…
ಬೀದರ.20.ಜೂನ್.25:- ಅರಣ್ಯ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್.21 ರಂದು ಬೀದರ…
ಕೊಪ್ಪಳ.20.ಜೂನ್.25:- ಕರ್ನಾಟಕ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ…