27.ಡಿ.24 ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶಿವ್ಯಾಧೆಕಿಯಿ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇ. ಜನವರಿ.17 ರಿಂದ 19 ರವರೆಗೆ ಪಶುವೈದ್ಯಕೀಯ ಪಶು ಹಾಗೂ ಮೀನುಗರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025 ದ ಸದುಪಯೋಗವನ್ನು ರೈತರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಈ ಮೇಳದಲ್ಲಿ ಜಾನುವಾರು ಮತ್ತು ಕುಕ್ಕಟ ತಳಿಗಳ ಪ್ರದರ್ಶನ, ಶ್ವಾನ ಪ್ರದರ್ಶನ, ಸಣ್ಣ ಮತ್ತು ಮುದ್ದು ಪ್ರಾಣಿ ಪಕ್ಷಿಗಳ ಪ್ರದರ್ಶನ, ಮೀನು ತಳಿಗಳು ಅಲಂಕಾರಿಕ ಮೀನುಗಳ ಪ್ರದರ್ಶನ, ಮಾದ್ಯವರ್ಧಿತ ಹಾಲು ಮತ್ತು ಹಾಲಿನ ಉತ್ಪನ್ನಗಳ ಪ್ರದರ್ಶನ, ವಿವಿಧ ಹೊಸ ತಂತ್ರಜ್ಞಾನಗಳ ಯಂತ್ರೋಪಕರಣಗಳ ಪ್ರದರ್ಶನ ಇರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಮೇಳದಲ್ಲಿ ರೈತರು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳಿಂದ 15-20 ಮಳಿಗೆಗಳನ್ನು ನಿರ್ಮಿಸಿ ಎನ್.ಆರ್.ಎಲ್.ಎಂ. ಮತ್ತು ಮಹಿಳಾ ರೈತರಿಗೆ ಶಕ್ತಿ ಯೋಜನೆಯಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಹಾಗೂ ಗ್ರಾಮ ಪಂಚಾಯತಿಗಳಿಂದ ಹೆಚ್ಚಿನ ಪ್ರಚಾರ ನೀಡಿ ರೈತರಿಗೆ ಸೇರಿಸಬೇಕು. ಈ ಮೇಳದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಮತ್ತು ಶಾಲೆಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕೆಂದರು.
ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯ ಬೀದರನ ವಿಸ್ತರಣಾ ನಿರ್ದೇಶಕರಾದ ಡಾ.ಬಸವರಾಜು ಅವಟಿ ಅವರು ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳು ಮತ್ತು ಯುವಕರಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಇದರ ಪ್ರಾಮುಖ್ಯತೆಗಳನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಾನುವಾರು ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಪೋಸ್ಟರ ಬಿಡುಗಡೆಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ.ಚನ್ನಪ್ಪಗೌಡ ಬಿರಾದಾರ, ಪ್ರಾದ್ಯಾಪಕರಾದ ಡಾ.ಎಂ.ಕೆ.ತಾಂದಳೆ, ಡಾ.ಶ್ರೀಕಾಂತ ಕುಲಕರ್ಣಿ, ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ ಕುಮಾರ ರಾಠೋಡ, ಡಾ.ವೆಂಕನಗೌಡ, ಡಾ.ಅಕ್ಷಯಕುಮಾರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣನವರ.
ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರಾದ ನರಸಪ್ಪ, ಡಾ.ಗೌತಮ ಅರಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Source www.prajaprabhat.com
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…