ಟೆಂಟ್‌ ಕಿತ್ತುಹಾಕಲು ಬಂದ ಪೊಲೀಸರ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಆಕ್ರೋಶ.!

ಬೆಂಗಳೂರು.01.ಫೇ.25:- ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ತೆರವುಗೊಳಿಸಲು ಮುಂದಾದ ಘಟನೆ ನಡೆದಿದೆ.ಇದಕ್ಕೆ ಪ್ರತಿಭಟನಾ ನಿರತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಪೊಲೀಸರು ಹಾಗೂ ಶಾಮಿಯಾನ ಸಿಬ್ಬಂದಿ ಬರಿಗೈಲಿ ಹಿಂತಿರುಗಬೇಕಾಯಿತು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಳೆದ ನಾಲ್ಕು ದಿನಗಳಿಂದ ಚಳಿ, ಬಿಸಿಲು ಲೆಕ್ಕಿಸದೆ ಧರಣಿ ನಡೆಸುತ್ತಿದ್ದಾರೆ. ಏಕಾಏಕಿ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಸಿಬ್ಬಂದಿ, ತೆರವು ಮಾಡುವಂತೆ ಸೂಚಿಸಿದರು. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟುಹಿಡಿದರು. ನಮ್ಮ ಟೆಂಟ್‌ ಕಿತ್ತರೆ ನಿಮ್ಮ ಸೀಟ್‌ ಕೀಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವುದನ್ನು ಮುಂದುವರೆಸಿದರು. ಆದರೂ ಶಾಮಿಯಾನಾ ಸಿಬ್ಬಂದಿ ಟೆಂಟ್‌ ತೆರವು ಮಾಡುತ್ತಲೇ ಇದ್ದರು. ಕೊನೆಗೆ ಹೋರಾಟಗಾರರ ಆಕ್ರೋಶಕ್ಕೆ ಮಣಿದ ಪೊಲೀಸರು ಮತ್ತು ಟೆಂಟ್‌ ಸಿಬ್ಬಂದಿ ವಾಪಸ್ಸಾದರು. ಅಂಗನವಾಡಿ ಕಾರ್ಯಕರ್ತೆಯರು ಅದೇ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ನಾವು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಕನ್ನಡ ಸಂಘಟನೆಯೊಂದಕ್ಕೆ ಪ್ರತಿಭಟನೆ ನಡೆಸಲು ಶನಿವಾರಕ್ಕೆ ಅನುಮತಿ ನೀಡಲಾಗಿದೆ. ಆದ್ದರಿಂದ ನಮ್ಮನ್ನು ತೆರವುಗೊಳಿಸಲು ಪೊಲೀಸರು ಆಗಮಿಸಿದ್ದಾರೆ ಎಂದು ಕಾರ್ಯಕರ್ತೆಯರು ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಅಧ್ಯಕ್ಷೆ ಬಿ.ಪ್ರೇಮಾ, ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಹೋರಾಟದ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಎಚ್ಚರಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಅಂಗನವಾಡಿ ಕೇಂದ್ರ ಮುಚಿ ಪ್ರತಿಭಟ್ನೆ ಮಾಡುತ್ತಿದ್ದಾರೆ.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

38 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago