ಬೀದರ.28.ಏಪ್ರಿಲ್.25:- ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಬೀದರ ಕ್ಷೇತ್ರದ ವಿಳಾಸಪುರ ಗ್ರಾಮದಲ್ಲಿ ಆಯೋಜಿಸಲಾದ ಸಂವಿಧಾನದ ಶಿಲ್ಪಿ, ಮಹಾಮಾನವತಾವಾದಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಟ್ಟಿಕೊಟ್ಟ ಸಂವಿಧಾನ ನಮ್ಮ ದೇಶದ ಮೂಲಭೂತ ಹಕ್ಕುಗಳ ರಕ್ಷಕವಾಗಿದೆ. ಅವರು ನೀಡಿದ ಪ್ರಜಾಪ್ರಭುತ್ವ, ಸಮಾನತೆ ಮತ್ತು ಸೌಹಾರ್ದತೆಯ ಮೌಲ್ಯಗಳು ನಮಗೆ ಸದಾ ದಾರಿದೀಪವಾಗಿವೆ. ಪ್ರತಿಯೊಬ್ಬ ನಾಗರಿಕನು ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸೋಕೊಂಡು ಸಮಾಜದ ಸದ್ಭಾವನೆ ಹಾಗೂ ಅಭಿವೃದ್ಧಿಗೆ ಕೆಲಸ ಮಾಡಬೇಕಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.
