ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಯಾವುದೇ ವಿವಾದ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆಯೇ ಡಿಕೆಶಿ ನಿವಾಸಕ್ಕೆ ಸಂಸದ ರಾಘವೇಂದ್ರ ಬಂದಿದ್ದಾರೆ. ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಸಂಸದರು ಭೇಟಿ ನೀಡಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿತ್ತು. ಹೊರಬಂದ ಬಳಿಕ ಮಾಧ್ಯಮಗಳು ಭೇಟಿಯ ಉದ್ದೇಶದ ಬಗ್ಗೆ ಪ್ರಶ್ನೆ ಕೇಳಿದ್ದಾರೆ.
ಈ ವೇಳೆ ಮಾತನಾಡಿದ ಅವರು ‘ಈ ಭೇಟಿಗೆ ಯಾವುದೇ ರಾಜಕೀಯ ಕಾರಣಗಳಿಲ್ಲ. ನನ್ನ ಮಗನ ಮದುವೆಯಿದೆ. ಅವರು ಈ ರಾಜ್ಯದ ಗೌರವಾನ್ವಿತ ಉಪಮುಖ್ಯಮಂತ್ರಿಗಳು. ಹೀಗಾಗಿ ಮದುವೆಗೆ ಕರೆಯಲು ಬಂದಿದ್ದೆ ಅಷ್ಟೇ. ಇದಕ್ಕೆ ರಾಜಕೀಯ ಉದ್ದೇಶ ಏನೂ ಇಲ್ಲ. ಈ ಬಗ್ಗೆ ವಿವಾದ ಬೇಡ’ ಎಂದಿದ್ದಾರೆ.
ಐದು ನಿಮಿಷ ಮದುವೆ ವಿಚಾರ ಮಾತನಾಡಿದ್ವಿ. ಬಳಿಕ ನಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮಾತನಾಡಿದ್ದೇವೆ ಅಷ್ಟೇ. ಬೇರೇನೂ ಇಲ್ಲ. ಅವರೂ ಮದುವೆಗೆ ಬರ್ತೀನಿ ಎಂದಿದ್ದಾರೆ. ಇನ್ನೂ ಸಾಕಷ್ಟು ಜನ ನಾಯಕರನ್ನು ಮದುವೆಗೆ ಆಹ್ವಾನಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…