07/08/2025 11:23 AM

Translate Language

Home » ಲೈವ್ ನ್ಯೂಸ್ » ಡಿ.ದೇವರಾಜು ಅರಸು ಜಯಂತಿ: ಆ.7ರಂದು ಪೂರ್ವಭಾವಿ ಸಭೆ

ಡಿ.ದೇವರಾಜು ಅರಸು ಜಯಂತಿ: ಆ.7ರಂದು ಪೂರ್ವಭಾವಿ ಸಭೆ

Facebook
X
WhatsApp
Telegram

ರಾಯಚೂರು.07.ಆಗಸ್ಟ್ .25: ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜಯಂತಿ ನಡೆಯಲಿದೆ.

ಈ ಜಯಂತಿ ಅಂಗವಾಗಿ ಆಗಸ್ಟ್ 7ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.

ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬoಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಮಾಜದ ಮುಖಂಡರುಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD