ಬೀದರ, ನವೆಂಬರ್.14 :- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನರ್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ್ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕರ್ಯರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಬನಸೋಡೆ ಹೇಳಿದರು.
ಅವರು ಇಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು, ವಿಭಾಗ, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣಗಳು, ಕಂದಾಯ ಅಪರಾಧ ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿಕೊಳ್ಳುವಂತಹ ಪ್ರಕರಣಗಳು, ಕರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ರ್ಥ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದರು.
ಈ ಹಿಂದೆ ಸೆಪ್ಟೆಂಬರ್.14, 2024 ರಂದು ರಾಷ್ಟ್ರೀಯ ಲೋಕ ಅದಾಲತ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಾಂತ ಒಟ್ಟು 17485 ಪ್ರಕರಣಗಳು, 6797 (ಪೆಂಡಿಂಗನಲ್ಲಿನ) ಪ್ರಕರಣಗಳು ಹಾಗೂ 10688 ವ್ಯಾಜ್ಯಪರ್ವ ಪ್ರಕರಣಗಳನ್ನು ಈ ಲೋಕ ಅದಾಲತನಲ್ಲಿ ಇತ್ರ್ಥಗೊಳಿಸಲಾಗಿದೆ. ಈ ಬಾರಿಯ ಲೋಕ ಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ (ಪೇಂಡಿಂಗ) ಇರುವ ಪ್ರಕರಣಗಳನ್ನು ಹೆಚ್ಚು ಹೆಚ್ಚು ಇತ್ರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಕಳೆದ ಲೋಕ ಅದಾಲತಗಿಂತ ಈ ಸಾರಿಯ ಲೋಕ ಅದಾಲತನಲ್ಲಿ ಹೆಚ್ಚು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ರ್ಥಗೊಳಿಸಲಾಗುವುದೆಂದರು.
ನವೆಂಬರ್.14, 2024 ರ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 29,789 ಪ್ರಕರಣಗಳು ಪೆಂಡಿಂಗ ಇದ್ದು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ. ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ, ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧ್ಯವ ಹೊಂದುವ ಅವಕಾಶ ಇರುತ್ತದೆ. ಜಿಲ್ಲೆಯ ಹೆಚ್ಚಿನ ಜನರು ಈ ಲೋಕ ಅದಾಲತನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳಾದ ಆಕಾಸ ಸಜ್ಜನ, ಜೀವನ, ನಾಗರಾಜ, ಪ್ರೀತಿ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
