ಶ್ರೀ ದತ್ತಾಶ್ರಮ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ದತ್ತಾಶ್ರಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ರಾಂಪೂರೆ ಕಾಲೋನಿಯಲ್ಲಿ ಡಿಸೇಂಬರ್ 14 ಮತ್ತು 15 ರಂದು ಎರಡು ದಿವಸಗಳ ಶ್ರೀ ದತ್ತ ಜಯಂತಿ ಆನಂದ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಿ. ರಂದು ಬೆಳಿಗ್ಗೆ 7:30 ಕ್ಕೆ ಶ್ರೀ ದತ್ತಾತ್ರೇಯ ಮಹಾಭಿಷೇಕ, 9 ಗಂಟೆ ಶ್ರೀ ದತ್ತಾತ್ರೇಯ ನವನಾಥ ಸಂಪ್ರದಾಯ ಯಜ್ಞ ಪ್ರಾರಂಭ ಹಾಗೂ ಮಧ್ಯಾಹ್ನ 12:30 ಪೂರ್ಣಾಹುತಿ ನೆರವೇರಲಿದೆ. ತದನಂತರ 3 ಗಂಟೆಗೆ ಗಣ್ಯರಿಗೆ ಸನ್ಮಾನ, ಸಂಜೆ 4:30 ಕ್ಕೆ ಪೂಜ್ಯ ಜ್ಯೋತಿರ್ಮಯಾನಂದರಿಂದ ಪ್ರವಚನ ಕಾರ್ಯಕ್ರಮ, ರಾತ್ರಿ 9:45 ಕ್ಕೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಡಿ. 15 ರಂದು ಬೆಳಿಗ್ಗೆ 11 ಗಂಟೆಗೆ ಪಲ್ಲಕ್ಕಿ ಸೇವೆ, 11:45 ಕ್ಕೆ ಗೋಪಾಳಕಾಲ, ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ, 3 ಗಂಟೆಗೆ ಪೀಠಾಧಿಪತಿಗಳಾದ ಶ್ರೀ ಜಗನ್ನಾಥ್ ಮಹಾರಾಜ ಕರಕಮಲದಿಂದ (ಬಿದಾಗಿ) ವಿತರಣೆ, 4 ಗಂಟೆಗೆ ಶ್ರೀ ದತ್ತ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ನಂತರ ದೀಪೋತ್ಸವ ಕಾರ್ಯಕ್ರಮ ಜರುಗಲಿದ್ದು. ಈ ಶ್ರೀ ದತ್ತ ಜಯಂತಿ ಆನಂದ ಮಹೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಭಕ್ತರು ಭಾಗವಹಿಸಿ ದತ್ತಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ದತ್ತಾಶ್ರಮ ಚಾರಿಟೇಬಲ್ ಟ್ರಸ್ಟ್ ನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…