ಡಿ.21 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ದಿನಾಂಕ ಮಾರ್ಪಡಿಸಿದ ಪರಿಷ್ಕೃತ ವೇಳಾಪಟ್ಟಿ!

18 ಡಿಸೆಂಬರ್ 24 ಬೀದರ್:-ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರೊ.ಬಸವರಾಜ್ ಸ್ವಾಮಿ ತಿಳಿಸಿದರು.

ಡಿ.21 ರಂದು ಚುನಾವಣಾ ದಿನಾಂಕ ಮಾರ್ಪಡಿಸಿದ ಪರಿಷ್ಕೃತ ವೇಳಾಪಟ್ಟಿ ಬಗ್ಗೆ ವಿವರಣೆ ನೀಡಿರುವ ಅವರು, ಈ ಚುನಾವಣೆಯು ಡಿ.4ರಂದು ನಡೆಯಬೇಕಾಗಿತ್ತು. ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ವಿಭಾಗೀಯ ಪೀಠದ ಡಬ್ಲೂ.ಪಿ. ಸಂಖ್ಯೆ 203405/2004 ರ ಆದೇಶದ ಮೇರೆಗೆ 2024-29ನೇ ಅವಧಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೀದರ್ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಚುನಾವಣೆಗೆ ಮಧ್ಯಂತರ ಆದೇಶದಲ್ಲಿ ಈ ತಿಂಗಳ 3ರಂದು ನೀಡಿದ ತಡೆಯಾಜ್ಞೆಯನ್ನು ಡಿ.9 ರಂದು ತೆರವುಗೊಳಿಸಿದೆ. ಹಾಗಾಗಿ ಡಿ.21ರಂದು ಜಿಲ್ಲಾಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನದ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದರು.

ಚುನಾವಣೆ ಮುಗಿದ ನಂತರ ಮತ ಎಣಿಕೆ ಪ್ರಕ್ರಿಯೆ ಆರಂಭಿಸಲಾಗುವುದು. ಜಿಲ್ಲೆಯಲ್ಲಿ ಸುಮಾರು 72 ಮತದಾರರಿದ್ದು, ಅದರಲ್ಲಿ ಒಬ್ಬರು ವಿಚಾರಣಾ ಖೈದಿ ಆಗಿರುವುದರಿಂದ ಅವರು ಮತ ಚಲಾಯಿಸುವುದು ಅನುಮಾನವಾಗಿದೆ. ಅವರ ವಿಚಾರಣೆ ಮುಗಿದು ದೋಷಮುಕ್ತರಾದರೆ ಅವರು ಮತ ಚಲಾಯಿಸಬಹುದು. ಈ ಚುನಾವಣೆಯಲ್ಲಿ ಎಲ್ಲ ತಾಲೂಕಿನ ತಾಲೂಕಾಧ್ಯಕ್ಷರು ಹಾಗೂ ಜಿಲ್ಲಾ ಸಂಘದ ನಿರ್ದೇಶಕರು ಮತದಾರರಾಗಿರುತ್ತಾರೆ ಎಂದು ತಿಳಿಸಿದರು.

ಮತದಾರರು ನಿರ್ಭಯದಿಂದ ಮತದಾನ ಮಾಡಬಹುದಾಗಿದೆ ಎಂದ ಅವರು, ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಹಾಲಿ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ್ ಗಂದಗೆ, ಸೋಮಶೇಖರ್ ಬಿರಾದಾರ್ ಚಿದ್ರಿ ಹಾಗೂ ಬಬ್ರುವಾಹನ ಸ್ಪರ್ಧಿಸುತ್ತಿದ್ದಾರೆ. ಜಿಲ್ಲಾ ಖಜಾಂಚಿ ಚುನಾವಣೆಯಲ್ಲಿ ದೇವಪ್ಪ ಹಾಗೂ ಮನೋಹರ ಕಾಶಿ ಮತ್ತು ರಾಜ್ಯ ಪರಿಷತ್ ಚುನಾವಣೆಯಲ್ಲಿ ರಾಜಕುಮಾರ್ ಮಾಳಗೆ ಹಾಗೂ ಬಸವರಾಜ ಜಕ್ಕಾ ಕಣದಲ್ಲಿರುವರು. ಮೂವರು ಅಭ್ಯರ್ಥಿಗಳಿಗಾಗಿ ಪ್ರತಿಯೊಬ್ಬ ಮತದಾರರು ತಲಾ ಮೂರು ಮತಗಳನ್ನು ಚಲಾಯಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಇದೇ ತಿಂಗಳ 27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ, ಖಜಾಂಚಿಗಳ ಚುನಾವಣೆ ನಡೆಯಲಿದೆ. ಜಿಲ್ಲೆಯ 27ಜನ ಪದಾಧಿಕಾರಿಗಳು ಅಂದಿನ ಚುನಾವಣೆಗೆ ಮತ ಚಲಾಯಿಸುವರು ಎಂದು ಹೇಳಿದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago