ಡಿ.24ರಂದು ಬೀದರ್ ನಲ್ಲಿ ನಡೆಯಲಿರುವ ಲೀನ್ ಯೋಜನೆ ಮತ್ತು ಝಡ್ ಇ.ಡಿ. ಹಾಗೂ
ರಫ್ತು ಕುರಿತು ಒಂದು ದಿನ ಅರಿವು ಮೂಡಿಸುವ ಕಾರ್ಯಕ್ರಮ
ಬೀದರನಡೆಯಲಿದೆk9,
ಡಿಸೆಂಬರ್.22 :- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ.) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಹಯೋಗದಲ್ಲಿ “ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” (ಖಂಒಪಿ) ಲೀನ್ ಯೋಜನೆ ಮತ್ತು ಝಡ್.ಇ.ಡಿ.ಹಾಗೂ ರಫ್ತು ಕುರಿತು ಒಂದು ದಿನ ಅರಿವು ಮೂಡಿಸುವ ಕಾರ್ಯಕ್ರಮವು
ಡಿಸೆಂಬರ್.24 ರಂದು ಬೆಳಿಗ್ಗೆ 10.30 ಗಂಟೆಗೆ ಮಸ್ಟಿಫ್ ಸೆಲೆಕ್ಟ್ ಹೋಟೆಲ್, ಚಿಕ್ಕಪೇಟೆ ಹತ್ತಿರ, ನಾವಡಗೇರಿ, ಬೀದರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಉದ್ಘಾಟನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ್ ಬದೋಲೆ ಅವರು ಭಾಗವಹಿಸಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಬೀದರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡ್ಟ್ರೀಸ್ ಅಧ್ಯಕ್ಷರಾದ ಬಿ.ಜಿ.ಶೆಟಕಾರ, ಬೀದರ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಶಿವರಾಜ ಹಲಶೆಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಪಿ.ವಿಜಯಕುಮಾರ, ಕೆಮಿಕಲ್ ಮತ್ತು ಫಾರ್ಮಾಸ್ಯುಟಿಕಲ್ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪಾ, ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸುರೇಖಾ ಮುನೊಳಿ, ವಿ.ಟಿ.ಪಿ.ಸಿ, ಕಲಬುರಗಿ ಶಾಖಾ ಕಛೇರಿಯ ಸಹಾಯಕ ನಿರ್ದೇಶಕರಾದ ಜಾಫರ್ ಖಾಸಿಂ ಅನ್ಸಾರಿ ಅವರುಗಳು ಭಾಗವಹಿಸಲಿದ್ದಾರೆ.
ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸಿಯಾ ಅಧ್ಯಕ್ಷರಾದ ಎಂ.ಜಿ.ರಾಜಗೋಪಾಲ್ ಅವರು ವಹಿಸಲಿದ್ದಾರೆ.
ಯೋಜನೆಯಡಿಯಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರಾಜ್ಯದ 20 ಜಿಲ್ಲೆಗಳಲ್ಲಿ ಕಾಸಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಸ್ಥಳೀಯ ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಆಯೋಜಿಸಲು ಯೋಜಿಸಲಾಗಿದೆ.
ಹಾಗೂ ದೀರ್ಘಾವಧಿಯ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯನ್ನು ಸಾಧಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ತಮ್ಮ ವ್ಯವಹಾರಗಳನ್ನು ಸಶಕ್ತಗೊಳಿಸುವುದಾಗಿದೆ.
ರಫ್ತು ಜಾಗೃತಿ ಕಾರ್ಯಗಾರ, ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ಇತರೆ ಕೈಗಾರಿಕಾ ವಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸೇರಿಸಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಉದ್ದೇಶಿತ ಕಾರ್ಯಕ್ರಮವು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಹಕಾರಿಯಾಗುವುದಲ್ಲದೇ ಎಂ.ಎಸ್.ಎಂ.ಇಗಳ ಸಾಮಥ್ರ್ಯ ವೃದ್ಧಿಗಾಗಿ ನಿರ್ಣಾಯಕವಾಗಲಿದೆ.
ಈ ಆರೀವ್ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕು
Source: www.prajaprabhat.com
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು,…
ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ…
ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್…
ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ…
2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…
ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…