ಡಿ.24 ಬೀದರ ಜಿಲ್ಲೆಯಲ್ಲಿ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, 2024-25 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವವನ್ನು 15 ರಿಂದ 29 ವರ್ಷದೊಳಗಿನ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್. ಹಾಗೂ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಯುವ ಒಕ್ಕೂಟಗಳ ಸಂಯುಕ್ತಶ್ರಯದಲ್ಲಿ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರದಲ್ಲಿ ಡಿಸೆಂಬರ್.28 ರಂದು ಬೆಳಿಗ್ಗೆ 10 ಗಂಟೆಯಿಂದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕಾರಣ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಗಳು ಡಿಸೆಂಬರ್.28 ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಕಾಲೇಜಿನಲ್ಲಿ ತಮ್ಮ ಬ್ಯಾಂಕ್ ಪಾಸ್ಬುಕ್, ಆಧಾರ ಕಾರ್ಡ್ನೊಂದಿಗೆ ಹಾಜರಾಗಿ ನೋಂದಣಿ ಮಾಡಿಕೊಳ್ಳುವಂತೆ ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ: ಡಿಸೆಂಬರ್.28 ರಂದು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ಸ್ಪರ್ಧೆ ಹಾಗೂ ಕಥೆ ಬರೆಯುವುದು (ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ), ಕವಿತೆ ಬರೆಯುವುದು (ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ), ಚಿತ್ರಕಲೆ (ಅಳತೆ 11.7”, 16.5”), ಮೊಬೈಲ್ ಫೋಟೋಗ್ರಾಫಿ, ಭಾಷಣ ಸ್ಪರ್ಧೆ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಇರಬೇಕು (ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) ಕನ್ನಡ ಭಾಷೆಯನ್ನು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಮಾತ್ರ ಸೀಮಿತಗೊಳಿಸಿದೆ. (ಕನ್ನಡ, ಆಂಗ್ಲ,ಹಿಂದಿ ಭಾಷೆಯಲ್ಲಿ) ಸ್ಪರ್ಧಾಳುಗಳು ಸಿದ್ಧಪಡಿಸಕೊಂಡಿರುವ ಆಯ್ದ ವಿಷಯಗಳ ಬಗ್ಗೆ 3 ನಿಮಿಷಗಳು, ಸಾಂಸ್ಕøತಿಕ ಕಾರ್ಯಕ್ರಮ ಜನಪದ ನೃತ್ಯ (ತಂಡ), ಜನಪದ ಗೀತೆ (ತಂಡ).
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೀದರ್ನ ಯುವ ಸಮಾಲೋಚಕರು (9886731405 / 8951003010), ಯುವ ಪರಿವರ್ತಕರು ಭಾಲ್ಕಿ (9164455516), ಯವ ಪರಿವರ್ತಕರು ಔರಾದ(ಬಿ) (7411916288), ಪರಿವರ್ತಕರು ಹುಮನಾಬಾದ (9535230350), ಪರಿವರ್ತಕರು ಬಸವಕಲ್ಯಾಣ (9164455516) ಸಂಪರ್ಕಿಸಬಹುದಾಗಿದೆ ಹಾಗೂ ಪ್ರಯಾಣ ಭತ್ತೆ ಮತ್ತು ನಗದು ಬಹುಮಾನವನ್ನು ಜಿಲ್ಲಾ ಮಟ್ಟದಲ್ಲಿ ತಾಲೂಕುಗಳಿಂದ ಆಗಮಿಸಿ ಭಾಗವಹಿಸುವ ಸ್ಪರ್ಧಾಳುಗಳು ನೋಂದಣಿ ಸಮಯದಲ್ಲಿ ನೀಡು ಬ್ಯಾಂಕ್ ಖಾತೆಗೆ ನೇರವಾಗಿ ಕೆ2 ಮೂಲಕ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
Source: www.prajaprabhat.com
ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ…
ಬೀದರ.12.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ,…
ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ…
ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು…
ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ…