ಬೀದರ.11.ಜೂನ್.25:- ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿಯಲ್ಲಿ ಬೀದರನ ವಿವಿಧ ಭೂ ಮಾಲೀಕರ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಿದ್ದು, ಅದರಂತೆ ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡಬೇಕಾಗಿರುವುದರಿಂದ ಜಮೀನಿನ ಮೇಲೆ ಯಾವುದೇ ರೀತಿಯ ವ್ಯಾಜ್ಯ ತಕರಾರುಗಳಿದ್ದಲ್ಲಿ ಜೂನ್.17 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ,
ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ, ಸಿದ್ದಶ್ರೀ ಕಾಂಪ್ಲೇಕ್ಸ್, 3ನೇ ಮಹಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ, ನೌಬಾದ್ ಬೀದರ ಇಲ್ಲಿಗೆ ತಕರಾರು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9743088173 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.