ಬೀದರ.13.ಮೇ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಕೋಶ ಬೀದರದಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆ (01) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ನುರಿತ ನಿವೃತ ಅಧೀಕ್ಷಕ ಅಭಿಯಂತರರು/ಕಾರ್ಯನಿರ್ವಾಹಕ ಅಭಿಯಂತರರು ಸಿವಿಲ್ ಇಂಜಿನಿಯರ್ನ್ನು ತೆಗೆದುಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗರಿಷ್ಠ 65 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು ರೂ.50/- ಶುಲ್ಕ ಪಾವತಿಸಿ ಖುದ್ದಾಗಿ ಈ ಕಛೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು, ಭರ್ತಿ ಮಾಡಿ, ಅರ್ಜಿಯ ಜೊತೆಯಲ್ಲಿ ಕೇಳಲಾದ ದಾಖಲಾತಿಗಳನ್ನು ಸ್ವಯಂ ಧೃಡಿಕರಣದೊಂದಿಗೆ ದಿನಾಂಕ: 19-05-2025 ರೊಳಗಾಗಿ ಖುದ್ದಾಗಿ ಕಛೇರಿಯ ಸಮಯದಲ್ಲಿ ಜೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ, ಬೀದರದಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಜಿಲ್ಲಾಧಿಕಾರಿಗಳ ಕಛೇರಿ, ಬೀದರಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.