ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೀದರ.26.ಮೇ.25:- ಇಂದು ಅಪರೇಷನ್‌ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.

ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತ್ರತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಡಾಂಬೆ ವೃತ್ತದಲ್ಲಿ ಸಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು.

ಶಾಸಕರು ಮೆರವಣಿಗೆಯಲ್ಲಿ ಕುಣಿದು ದಣಿದಿದ್ದಾರೆ. ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ. ಬೇರೆ ಏನೂ ಸಮಸ್ಯೆ ಇಲ್ಲ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ.



ಯಾತ್ರೆಯಲ್ಲಿ ಬೀದ‌ರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

52 minutes ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

2 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago