Categories: ಬೀದರ

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ   ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ

ಬೀದರ.22.ಜೂನ್.25:- ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶ್ವ ಯೋಗ ದಿನ ಎಂದು ಕರೆಯುತ್ತಾರೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು.

ಅವರು ಶನಿವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ರಾಷ್ಟಿçಯ ಸೇವಾ ಯೋಜನೆ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ ಬೀದರನಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊದಲ ಬಾರಿಗೆ ಇದನ್ನು 21 ಜೂನ್ 2015 ರಂದು ಆಚರಿಸಲಾಯಿತು. ಭಾರತದ ಪ್ರಧಾನಮಂತ್ರಿಯವರು 27 ಸೆಪ್ಟೆಂಬರ್ 2014 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗಕ್ಕೆ ಸಂಬAಧಿಸಿದ ಪ್ರಭಾವಶಾಲಿ ಭಾಷಣವನ್ನು ನೀಡುವ ಮೂಲಕ ಈ ಉಪಕ್ರಮವನ್ನು ಕೈಗೊಂಡರು. ಈ ಕಾರಣಕ್ಕಾಗಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಲಾಯಿತು ಎಂದು ಹೇಳಿದರು.


ಈ ವರ್ಷದ ಘೋಷವಾಕ್ಯ “ಒಂದು ಭೂಮಿ ಒಂದು ಆರೋಗ್ಯ” ಈ ಮೂಲಕ ಜಗತ್ತೆ ಒಂದು ಎಂದು ಸಾರುವ ಮೂಲಕ ಎಲ್ಲರ ಆರೋಗ್ಯ ಅತೀ ಮುಖ್ಯವಾಗಿರುವುದೆಂದು ತೋರಿಸುತ್ತದೆ. ಪ್ರಪಂಚದಾದ್ಯoತ ಸಾವಿರಾರು ಜನರು ಇದನ್ನು ತಮ್ಮ ದೈನಂದಿನ ದಿನಚರಿಯ ಭಾಗವಾಗಿಸಿಕೊಂಡಿದ್ದಾರೆ. ಹಾಗೂ ಇದರಿಂದ ರೋಗಮುಕ್ತ ಜೀವನವನ್ನು ಹೊಂದಲು ಯೋಗವು ಬಹಳ ಸಹಕಾರಿಯಾಗಿದೆ ಎಂದರು.

ಕು. ಆಶಾರಾಣಿ ಹೌದಖಾನಿ, ಯುವ ಯೋಗ ಪಟು, ಬೀದರ ರವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದದಲ್ಲಿದ್ದಂತಹ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ಮಾಹಿತಿ ನೀಡಿ ಯೋಗದ ಆಸನಗಳ ಪ್ರಾತ್ಯಕ್ಷಿಕೆ ಮೂಲಕ ಯೋಗವು ಮಾಡುವಂತೆ ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ರಾಷ್ಟಿçಯ ಸೇವಾ ಯೋಜನೆಯ ಸಂಯೋಜಕರಾದ ಡಾ. ವಿಜಯಮಹಾಂತೇಶ ಹಾಗೂ ಡಾ. ರಮೇಶ ನಾಯಕ್, ಮಹಾವಿದ್ಯಾಲಯದ ಬೋಧಕ, ಬೊಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಥಮ ವರ್ಷದ ಎನ್.ಎಸ್.ಎಸ್. ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.

prajaprabhat

Share
Published by
prajaprabhat

Recent Posts

PSI 1000 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ: ಸಚಿವ ಜಿ. ಪರಮೇಶ್ವರ್

ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…

3 hours ago

ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…

3 hours ago

ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…

3 hours ago

ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ…

3 hours ago

ಇಂದು ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮ್

ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ…

3 hours ago

ಜೂ. 23 ರಂದು ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜೂನ್.25:-  ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್‌ನ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಜೂನ್…

3 hours ago