20ಡಿಸೆಂಬರ್.24.ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಪರಿಹಾರ ಬಡಗಿಸುವ್ ಸಲಹೆ ಮತ್ತು ಬೇರೆ ಬೇರೆ ಬೆಳೆಗಳ ಬಗ್ಗೆಯೂ ಗಮನ ಹರಿಸಿ ಉತ್ತಮ ಲಾಭವನ್ನು ಪಡೆಯಬೇಕು.
ರೈತರು ತೋಟಗಾರಿಕೆ ಬೆಳೆಗಳ ಬಗ್ಗೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಗ್ರವಾದಂತಹ ಮಾಹಿತಿಯನ್ನು ಪಡೆದು ರೈತರಿಗೆ ಸೂಕ್ತವಾದಂತಹ ಸಲಹೆ ಸೂಚನೆಗಳನ್ನು ಒದಗಿಸಬೇಕು ಹಾಗೂ ರೈತರು ಒಂದೇ ಬೆಳೆಯ ಮೇಲೆ ಅವಲಂಬಿತ ಇರಬಾರದು ಅಂದು ಅವರಿಗೆ ಬೇರೆ ಬೇರೆ ಮಾಹಿತಿಯ ಕೊಡೋಕೆ ಕಾರ್ಯಗಾರ ಇಟ್ಕೊಳ್ಲಾಗಿದೆ.
ಅವಲಂಬಿತರಾಗಿರದೇ ಬೇರೆ-ಬೇರೆ ಬೆಳೆಗಳ ಬಗ್ಗೆಯೂ ಗಮನ ಹರಿಸಿ ಉತ್ತಮ ಲಾಭವನ್ನು ಕಂಡುಕೊಳ್ಳಬಹುದಾಗಿದೆ. ರೈತರು ಪಪಾಯ ಬೆಳೆಯನ್ನು ಸಹ ಬೆಳೆದು ಉತ್ತಮ ರೀತಿಯ ಲಾಭವನ್ನು ಗಳಿಸಬಹುದೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಹೇಳಿದರು.
ರೈತರು ಅವರು ಇತ್ತೀಚಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಮತ್ತು ತೋಟಗಾರಿಕೆ ಇಲಾಖೆ ಬೀದರ ಇವರುಗಳ ಸಹಯೊಗದೊಂದಿಗೆ ಬೀದರ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಮೂರನೆ ತ್ರೈ ಮಾಸಿಕ ತೋಟಗಾರಿಕೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರೈತರು ಮಾವಿನ ಬೆಳೆಯಲ್ಲಿ ಎದುರಿಸುತ್ತಿರುವ ಕೀಟಗಳ ಬಾಧೆಯ ಬಗ್ಗೆ ಚರ್ಚಿಸುತ್ತಾ ಕೀಟ ನಿರ್ವಹಣೆ ಬಗ್ಗೆ ಸಮಗ್ರವಾದಂತಹ ಮಾಹಿತಿಯನ್ನು ರೈತರಿಗೆ ಒದಗಿಸುವಂತೆ ಸಭೆಯಲ್ಲಿದ್ದಂತಹ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು. ಕಸ್ತೂರಿ ಕಲ್ಲಂಗಡಿ ಬೆಳೆಯ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ರೈತರಿಗೆ ಮೌಖಿಕ ಮಾಹಿತಿಯನ್ನು ಒದಗಿಸುವುದು ಅತಿ ಅವಶ್ಯಕವಾಗಿರುತ್ತದೆ ಎಂದು ಹೇಳಿದರು.
ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಬಾಗಲಕೋಟ ಮತ್ತು ತೋಟಗಾರಿಕೆ ಇಲಾಖೆ ಬೀದರ್ ಇವರುಗಳು ಸಹಯೋಗದಲ್ಲಿ ತೋಟಗಾರಿಕೆ ವಿಜ್ಞಾನ ಮಹಾವಿದ್ಯಾಲಯ ಬೀದರ್ ಇಲ್ಲಿ ರೈತರಗೋಸ್ಕರ ಕಸ್ತೂರಿ ಕಲ್ಲಂಗಡಿ ಬೆಳೆಯ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ರೈತರಿಗೆ ಮೌಖಿಕ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬೀದರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ವಿಶ್ವನಾಥ ಝಿಳ್ಳೆ, ಬೀದರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕರಾದ ಸುನೀಲ ಗಂಗಶ್ರೀ, ಡಾ.ವಿ.ಪಿ.ಸಿಂಗ್, ಡಾ.ವಿಜಯಮಹಾಂಏಶ, ಡಾ.ಕಡ್ಲಿ ವಿರೇಶ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ.ಪ್ರಶಾಂತ, ಡಾ.ಅಬ್ದುಲ್ ಕರೀಮ್ ಎಂ., ಡಾ.ಅಂಬ್ರೇಷ್, ಡಾ.ವಿ.ಪಿ.ಸಿಂಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Source: www.prajaprabhat.com
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…